ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

ಬೆಳ್ತಂಗಡಿ :ಕಳಿಯ ಪಂಚಾಯತ್ ವ್ಯಾಪ್ತಿಯಲ್ಲಿರುವ ಗೋವಿಂದೂರು ಮತ್ತು ಯಂತ್ರಡ್ಕ ಸಮೀಪದ ರಸ್ತೆಯಲ್ಲಿ ಬೃಹತ್ತಾದ ಗುಂಡಿಗಳು ಸೃಷ್ಟಿಯಾಗಿದೆ. ಮಳೆ ಬರುವ ಸಂದರ್ಭದಲ್ಲಿ ನೀರು ನಿಂತಿರುವ ಗುಂಡಿ ಗಮನಕ್ಕೆ ಬಾರದೆ ಸುಮಾರು 10 ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಜೊತೆಯಲ್ಲಿದ್ದ ಮಹಿಳೆಯರು, ಮಕ್ಕಳು ರಸ್ತೆಗೆ ಅಪ್ಪಳಿಸಿ ಕೈ-ಕಾಲು – ತಲೆಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಅವರಿಗೆ ಸಹಾಯ ಮಾಡಿದ ಬಗ್ಗೆ ರಸ್ತೆ ಪಕ್ಕದ ಮನೆಯವರು ಬೇಸರ ವ್ಯಕ್ತಪಡಿಸಿದರು.


ರಸ್ತೆ ಗುಂಡಿಗೆ ಬಿದ್ದು ದೊಡ್ಡ ಅನಾಹುತ ಆಗುವುದನ್ನೇ ಸಂಬಂಧಿಸಿದ ಇಲಾಖೆ ಹಾಗೂ ಜನಪ್ರತಿನಿಧಿಗಳು ಕಾಯುತ್ತಾರೆ ಸಂಬಂಧಿಸಿದ ಇಲಾಖೆಯವರು ಎಂದು ಬೇಸರದಿಂದ ನೀಡಿದರು.
ವಿವಿಧ ಇಲಾಖೆಯ ನೂರಾರು ಸರಕಾರಿ ನೌಕರರು, ಉನ್ನತ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇದೇ ರಸ್ತೆಯಲ್ಲಿಯೇ ಕಣ್ಣು ಮುಚ್ಚಿ ಕೊಂಡು ಪ್ರಯಾಣ ಮಾಡುತ್ತಾರೆ. ಅದರೂ ಕಿಂಚಿತ್ತೂ ಗಮನಹರಿಸಲು ಸಾಧ್ಯವಾಗುವುದಿಲ್ಲ ಎಂದು ಸ್ಥಳೀಯ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದರು.


ತಕ್ಷಣ ರಸ್ತೆ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ವರದಿ : ಕೆ.ಎನ್ ಗೌಡ

Related posts

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಆ.29-31: ಲಾಯಿಲದಲ್ಲಿ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಬೆಳ್ತಂಗಡಿಗೆ ಭೇಟಿ: ಸಾವ೯ಜನಿಕ ಅಹವಾಲು ಸ್ವೀಕಾರ

Suddi Udaya

ಹಲವಾರು ಶವಗಳನ್ನು ಹೂತಿದ್ದೆ ಎಂಬ ದೂರು ಪ್ರಕರಣ: ಎಸ್.ಐ.ಟಿ. ತನಿಖಾ ತಂಡದಿಂದ ಸತ್ಯಾಂಶ ಅತಿ ಶೀಘ್ರವಾಗಿ ಬಹಿರಂಗ ಪಡಿಸಲಿ: ಕೆ. ಪಾರ್ಶ್ವನಾಥ್ ಜೈನ್

Suddi Udaya
error: Content is protected !!