July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

ಬೆಳ್ತಂಗಡಿ :ಕಳಿಯ ಪಂಚಾಯತ್ ವ್ಯಾಪ್ತಿಯಲ್ಲಿರುವ ಗೋವಿಂದೂರು ಮತ್ತು ಯಂತ್ರಡ್ಕ ಸಮೀಪದ ರಸ್ತೆಯಲ್ಲಿ ಬೃಹತ್ತಾದ ಗುಂಡಿಗಳು ಸೃಷ್ಟಿಯಾಗಿದೆ. ಮಳೆ ಬರುವ ಸಂದರ್ಭದಲ್ಲಿ ನೀರು ನಿಂತಿರುವ ಗುಂಡಿ ಗಮನಕ್ಕೆ ಬಾರದೆ ಸುಮಾರು 10 ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಜೊತೆಯಲ್ಲಿದ್ದ ಮಹಿಳೆಯರು, ಮಕ್ಕಳು ರಸ್ತೆಗೆ ಅಪ್ಪಳಿಸಿ ಕೈ-ಕಾಲು – ತಲೆಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಅವರಿಗೆ ಸಹಾಯ ಮಾಡಿದ ಬಗ್ಗೆ ರಸ್ತೆ ಪಕ್ಕದ ಮನೆಯವರು ಬೇಸರ ವ್ಯಕ್ತಪಡಿಸಿದರು.


ರಸ್ತೆ ಗುಂಡಿಗೆ ಬಿದ್ದು ದೊಡ್ಡ ಅನಾಹುತ ಆಗುವುದನ್ನೇ ಸಂಬಂಧಿಸಿದ ಇಲಾಖೆ ಹಾಗೂ ಜನಪ್ರತಿನಿಧಿಗಳು ಕಾಯುತ್ತಾರೆ ಸಂಬಂಧಿಸಿದ ಇಲಾಖೆಯವರು ಎಂದು ಬೇಸರದಿಂದ ನೀಡಿದರು.
ವಿವಿಧ ಇಲಾಖೆಯ ನೂರಾರು ಸರಕಾರಿ ನೌಕರರು, ಉನ್ನತ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇದೇ ರಸ್ತೆಯಲ್ಲಿಯೇ ಕಣ್ಣು ಮುಚ್ಚಿ ಕೊಂಡು ಪ್ರಯಾಣ ಮಾಡುತ್ತಾರೆ. ಅದರೂ ಕಿಂಚಿತ್ತೂ ಗಮನಹರಿಸಲು ಸಾಧ್ಯವಾಗುವುದಿಲ್ಲ ಎಂದು ಸ್ಥಳೀಯ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದರು.


ತಕ್ಷಣ ರಸ್ತೆ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ವರದಿ : ಕೆ.ಎನ್ ಗೌಡ

Related posts

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಲಾಯಿಲ: ಶಿವಪ್ಪ ಬೆರ್ಕೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ಉಸ್ತುವಾರಿ ಸಚಿವ ಗುಂಡೂರಾವ್ ರವರಿಗೆ ಮನವಿ

Suddi Udaya
error: Content is protected !!