25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೋವಿಂದೂರು ರಾಜ್ಯ ಹೆದ್ದಾರಿಯಲ್ಲಿ ಜೀವ ಬಲಿ ಪಡೆಯಲು ಕಾಯುತ್ತಿದೆ ರಸ್ತೆ ಗುಂಡಿಗಳ ಸಾಲು

ಬೆಳ್ತಂಗಡಿ :ಕಳಿಯ ಪಂಚಾಯತ್ ವ್ಯಾಪ್ತಿಯಲ್ಲಿರುವ ಗೋವಿಂದೂರು ಮತ್ತು ಯಂತ್ರಡ್ಕ ಸಮೀಪದ ರಸ್ತೆಯಲ್ಲಿ ಬೃಹತ್ತಾದ ಗುಂಡಿಗಳು ಸೃಷ್ಟಿಯಾಗಿದೆ. ಮಳೆ ಬರುವ ಸಂದರ್ಭದಲ್ಲಿ ನೀರು ನಿಂತಿರುವ ಗುಂಡಿ ಗಮನಕ್ಕೆ ಬಾರದೆ ಸುಮಾರು 10 ಕ್ಕೂ ಹೆಚ್ಚು ದ್ವಿಚಕ್ರ ವಾಹನ ಸವಾರರ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಜೊತೆಯಲ್ಲಿದ್ದ ಮಹಿಳೆಯರು, ಮಕ್ಕಳು ರಸ್ತೆಗೆ ಅಪ್ಪಳಿಸಿ ಕೈ-ಕಾಲು – ತಲೆಗೆ ಗಾಯ ಮಾಡಿಕೊಂಡು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಅವರಿಗೆ ಸಹಾಯ ಮಾಡಿದ ಬಗ್ಗೆ ರಸ್ತೆ ಪಕ್ಕದ ಮನೆಯವರು ಬೇಸರ ವ್ಯಕ್ತಪಡಿಸಿದರು.


ರಸ್ತೆ ಗುಂಡಿಗೆ ಬಿದ್ದು ದೊಡ್ಡ ಅನಾಹುತ ಆಗುವುದನ್ನೇ ಸಂಬಂಧಿಸಿದ ಇಲಾಖೆ ಹಾಗೂ ಜನಪ್ರತಿನಿಧಿಗಳು ಕಾಯುತ್ತಾರೆ ಸಂಬಂಧಿಸಿದ ಇಲಾಖೆಯವರು ಎಂದು ಬೇಸರದಿಂದ ನೀಡಿದರು.
ವಿವಿಧ ಇಲಾಖೆಯ ನೂರಾರು ಸರಕಾರಿ ನೌಕರರು, ಉನ್ನತ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಇದೇ ರಸ್ತೆಯಲ್ಲಿಯೇ ಕಣ್ಣು ಮುಚ್ಚಿ ಕೊಂಡು ಪ್ರಯಾಣ ಮಾಡುತ್ತಾರೆ. ಅದರೂ ಕಿಂಚಿತ್ತೂ ಗಮನಹರಿಸಲು ಸಾಧ್ಯವಾಗುವುದಿಲ್ಲ ಎಂದು ಸ್ಥಳೀಯ ನಾಗರಿಕರು ಅಸಮಾಧಾನ ವ್ಯಕ್ತಪಡಿಸಿದರು.


ತಕ್ಷಣ ರಸ್ತೆ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ವರದಿ : ಕೆ.ಎನ್ ಗೌಡ

Related posts

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಬ್ಧಿ ಸಾಂಸ್ಕೃತಿಕ ಹಬ್ಬ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

Suddi Udaya
error: Content is protected !!