25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

ಬೆಳ್ತಂಗಡಿ: ಕನ್ನಡ ಸಂಘದ ಚಟುವಟಿಕೆ ಉದ್ಘಾಟನಾ ಸಮಾರಂಭಕ್ಕೆ ಮಾತ್ರ ಸೀಮಿತವಾಗದೆ ಇಡೀ ವರ್ಷ ಕವಿಗೋಷ್ಠಿ, ಚಿಂತನ ಮಂಥನ, ಕವಿ ವಿಮರ್ಷೆ, ಭಿತ್ರಿ ಪತ್ರ ರಚನೆ, ವ್ಯಕ್ತಿ ಆಧರಿತ ಉಪನ್ಯಾಸ ಮಾಲಿಕೆ ಮುಂತಾದ ಯೋಜನೆಗಳೊಂದಿಗೆ ನಡೆದು ವರ್ಷಾಂತ್ಯಕ್ಕೆ ‘ವಿದ್ಯಾರ್ಥಿ ಸಮ್ಮೇಳನ’ ರೀತಿಯಲ್ಲಿ ಸಮಾರೋಪಗೊಳ್ಳುವಂತಾಗಬೇಕು ಎಂದು ಕಸಾಪ ಸಂಘ ಸಂಸ್ಥೆಗಳ ಪ್ರತಿನಿಧಿ, ಪತ್ರಕರ್ತ ಅಚ್ಚು ಮುಂಡಾಜೆ ಅಭಿಪ್ರಾಯಪಟ್ಟರು.

ಉಜಿರೆ ಎಸ್ ಡಿ ಎಂ ಪ.ಪೂ ಕಾಲೇಜಿನಲ್ಲಿ ಜು.10 ರಂದು ನಡೆದ ಕನ್ನಡ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ವಿಚಾರಗಳನ್ನೇ ಸಂವೇದನಾ ಶೀಲ ಮನೋಭಾವದಿಂದ ಕಂಡು ಲೇಖನ, ಕವನಗಳ ಮೂಲಕ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಳ್ಳುವಂತಾಬೇಕು. ಪದಗಳ ಸಂಗ್ರಹಕ್ಕಾಗಿ ಓದುವ ಹವ್ಯಾಸ ಬಹುಮುಖ್ಯ. ಇಂಗ್ಲೀಷ್ ನಲ್ಲಿ ಕಲಿತರೆ ಮಾತ್ರ ಉನ್ನತ ಅವಕಾಶ ಎಂಬ ಮೊದಲಿಸುವಿಕೆ ತೊಲಗಿಸಿ ಕನ್ನಡಕ್ಕೂ ಭವಿಷ್ಯವಿದೆ ಎಂದು ತಮ್ಮ ಬರಹ, ವಿಮರ್ಷೆ, ಕವನ, ಸಾಹಿತ್ಯ‌ ರಚನೆ‍ಯ ಮೂಲಕ ತೋರಿಸಿಕೊಡಬಹುದು ಎಂದರು. ಭಾಷಣದ ಕೊನೆಗೆ ಅವರು ಸ್ವರಚಿತ ಕವನ ವಾಚಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಮಾತನಾಡಿ, ಇಂತಹಾ ಸಂಘಗಳಿಂದ ವಿದ್ಯಾರ್ಥಿಗಳಲ್ಲಿ ವಿಚಾರ ಆಸಕ್ತಿ ಹಾಗೂ ಪ್ರತಿಭೆ ಹೊರಬರಲು ಕಾರಣವಾಗುತ್ತದೆ. ಇದೂ ಅಲ್ಲದೆ ವರ್ಷ ಸ್ಪರ್ಧೆ, ಭಿತ್ತಿ‌ಪತ್ರಿಕೆ ‌ಮೊದಲಾದವುಗಳ ಮೂಲಕ ಅವರನ್ನು ತೊಡಗಿಸಿಕೊಳ್ಳುವಂತೆ ಮಾಡುತ್ತೇವೆ ಎಂದರು.

ವೇದಿಕೆಯಲ್ಲಿ ಕಾಲೇಜಿನ ಉಪಪ್ರಾಂಶುಪಾಲ‌ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ರಾಜೇಶ್ ಬಿ ಉಪಸ್ಥಿತರಿದ್ದರು.
ಹಸೀನಾ ಮತ್ತು ಬಳಗದವರು ಪ್ರಾರ್ಥನೆ ಹಾಡಿದರು. ಸಂಕೇತ್ ಸ್ವಾಗತಿಸಿದರು. ಕುಶ ಅತಿಥಿ ಪರಿಚಯ ಮಾಡಿದರು. ಸಾಕ್ಷಿ ನಿರೂಪಿಸಿದರು. ತೇಜನ್ ವಂದಿಸಿದರು.

Related posts

ಬರೆಂಗಾಯ ಶಾಲಾ ಅಮೃತ ಮಹೋತ್ಸವದ ಪೂರ್ವಭಾವಿ ಸಭೆ: ಅಮೃತ ಮಹೋತ್ಸವಕ್ಕೆ ಲಕ್ಷ್ಮಿ ದೇವಧರ್ ಮತ್ತು ಮಕ್ಕಳು ಮೊಳಂಪಾಯ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅನುಜ್ಞಾ ತೇರ್ಗಡೆ

Suddi Udaya

ಪ್ರಬಂಧ ಸ್ಪರ್ಧೆ: ಅರ್ಪಿತಾ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya
error: Content is protected !!