July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

ಬೆಳ್ತಂಗಡಿ: ಕನ್ನಡ ಸಂಘದ ಚಟುವಟಿಕೆ ಉದ್ಘಾಟನಾ ಸಮಾರಂಭಕ್ಕೆ ಮಾತ್ರ ಸೀಮಿತವಾಗದೆ ಇಡೀ ವರ್ಷ ಕವಿಗೋಷ್ಠಿ, ಚಿಂತನ ಮಂಥನ, ಕವಿ ವಿಮರ್ಷೆ, ಭಿತ್ರಿ ಪತ್ರ ರಚನೆ, ವ್ಯಕ್ತಿ ಆಧರಿತ ಉಪನ್ಯಾಸ ಮಾಲಿಕೆ ಮುಂತಾದ ಯೋಜನೆಗಳೊಂದಿಗೆ ನಡೆದು ವರ್ಷಾಂತ್ಯಕ್ಕೆ ‘ವಿದ್ಯಾರ್ಥಿ ಸಮ್ಮೇಳನ’ ರೀತಿಯಲ್ಲಿ ಸಮಾರೋಪಗೊಳ್ಳುವಂತಾಗಬೇಕು ಎಂದು ಕಸಾಪ ಸಂಘ ಸಂಸ್ಥೆಗಳ ಪ್ರತಿನಿಧಿ, ಪತ್ರಕರ್ತ ಅಚ್ಚು ಮುಂಡಾಜೆ ಅಭಿಪ್ರಾಯಪಟ್ಟರು.

ಉಜಿರೆ ಎಸ್ ಡಿ ಎಂ ಪ.ಪೂ ಕಾಲೇಜಿನಲ್ಲಿ ಜು.10 ರಂದು ನಡೆದ ಕನ್ನಡ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ವಿಚಾರಗಳನ್ನೇ ಸಂವೇದನಾ ಶೀಲ ಮನೋಭಾವದಿಂದ ಕಂಡು ಲೇಖನ, ಕವನಗಳ ಮೂಲಕ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಳ್ಳುವಂತಾಬೇಕು. ಪದಗಳ ಸಂಗ್ರಹಕ್ಕಾಗಿ ಓದುವ ಹವ್ಯಾಸ ಬಹುಮುಖ್ಯ. ಇಂಗ್ಲೀಷ್ ನಲ್ಲಿ ಕಲಿತರೆ ಮಾತ್ರ ಉನ್ನತ ಅವಕಾಶ ಎಂಬ ಮೊದಲಿಸುವಿಕೆ ತೊಲಗಿಸಿ ಕನ್ನಡಕ್ಕೂ ಭವಿಷ್ಯವಿದೆ ಎಂದು ತಮ್ಮ ಬರಹ, ವಿಮರ್ಷೆ, ಕವನ, ಸಾಹಿತ್ಯ‌ ರಚನೆ‍ಯ ಮೂಲಕ ತೋರಿಸಿಕೊಡಬಹುದು ಎಂದರು. ಭಾಷಣದ ಕೊನೆಗೆ ಅವರು ಸ್ವರಚಿತ ಕವನ ವಾಚಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಮಾತನಾಡಿ, ಇಂತಹಾ ಸಂಘಗಳಿಂದ ವಿದ್ಯಾರ್ಥಿಗಳಲ್ಲಿ ವಿಚಾರ ಆಸಕ್ತಿ ಹಾಗೂ ಪ್ರತಿಭೆ ಹೊರಬರಲು ಕಾರಣವಾಗುತ್ತದೆ. ಇದೂ ಅಲ್ಲದೆ ವರ್ಷ ಸ್ಪರ್ಧೆ, ಭಿತ್ತಿ‌ಪತ್ರಿಕೆ ‌ಮೊದಲಾದವುಗಳ ಮೂಲಕ ಅವರನ್ನು ತೊಡಗಿಸಿಕೊಳ್ಳುವಂತೆ ಮಾಡುತ್ತೇವೆ ಎಂದರು.

ವೇದಿಕೆಯಲ್ಲಿ ಕಾಲೇಜಿನ ಉಪಪ್ರಾಂಶುಪಾಲ‌ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ರಾಜೇಶ್ ಬಿ ಉಪಸ್ಥಿತರಿದ್ದರು.
ಹಸೀನಾ ಮತ್ತು ಬಳಗದವರು ಪ್ರಾರ್ಥನೆ ಹಾಡಿದರು. ಸಂಕೇತ್ ಸ್ವಾಗತಿಸಿದರು. ಕುಶ ಅತಿಥಿ ಪರಿಚಯ ಮಾಡಿದರು. ಸಾಕ್ಷಿ ನಿರೂಪಿಸಿದರು. ತೇಜನ್ ವಂದಿಸಿದರು.

Related posts

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ ಆರಂಭ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya
error: Content is protected !!