26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

ಬೆಳ್ತಂಗಡಿ: ಕನ್ನಡ ಸಂಘದ ಚಟುವಟಿಕೆ ಉದ್ಘಾಟನಾ ಸಮಾರಂಭಕ್ಕೆ ಮಾತ್ರ ಸೀಮಿತವಾಗದೆ ಇಡೀ ವರ್ಷ ಕವಿಗೋಷ್ಠಿ, ಚಿಂತನ ಮಂಥನ, ಕವಿ ವಿಮರ್ಷೆ, ಭಿತ್ರಿ ಪತ್ರ ರಚನೆ, ವ್ಯಕ್ತಿ ಆಧರಿತ ಉಪನ್ಯಾಸ ಮಾಲಿಕೆ ಮುಂತಾದ ಯೋಜನೆಗಳೊಂದಿಗೆ ನಡೆದು ವರ್ಷಾಂತ್ಯಕ್ಕೆ ‘ವಿದ್ಯಾರ್ಥಿ ಸಮ್ಮೇಳನ’ ರೀತಿಯಲ್ಲಿ ಸಮಾರೋಪಗೊಳ್ಳುವಂತಾಗಬೇಕು ಎಂದು ಕಸಾಪ ಸಂಘ ಸಂಸ್ಥೆಗಳ ಪ್ರತಿನಿಧಿ, ಪತ್ರಕರ್ತ ಅಚ್ಚು ಮುಂಡಾಜೆ ಅಭಿಪ್ರಾಯಪಟ್ಟರು.

ಉಜಿರೆ ಎಸ್ ಡಿ ಎಂ ಪ.ಪೂ ಕಾಲೇಜಿನಲ್ಲಿ ಜು.10 ರಂದು ನಡೆದ ಕನ್ನಡ ಸಂಘದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ವಿಚಾರಗಳನ್ನೇ ಸಂವೇದನಾ ಶೀಲ ಮನೋಭಾವದಿಂದ ಕಂಡು ಲೇಖನ, ಕವನಗಳ ಮೂಲಕ ಸಾಹಿತ್ಯ ರಚನೆಯಲ್ಲಿ ತೊಡಗಿಸಿಕೊಳ್ಳುವಂತಾಬೇಕು. ಪದಗಳ ಸಂಗ್ರಹಕ್ಕಾಗಿ ಓದುವ ಹವ್ಯಾಸ ಬಹುಮುಖ್ಯ. ಇಂಗ್ಲೀಷ್ ನಲ್ಲಿ ಕಲಿತರೆ ಮಾತ್ರ ಉನ್ನತ ಅವಕಾಶ ಎಂಬ ಮೊದಲಿಸುವಿಕೆ ತೊಲಗಿಸಿ ಕನ್ನಡಕ್ಕೂ ಭವಿಷ್ಯವಿದೆ ಎಂದು ತಮ್ಮ ಬರಹ, ವಿಮರ್ಷೆ, ಕವನ, ಸಾಹಿತ್ಯ‌ ರಚನೆ‍ಯ ಮೂಲಕ ತೋರಿಸಿಕೊಡಬಹುದು ಎಂದರು. ಭಾಷಣದ ಕೊನೆಗೆ ಅವರು ಸ್ವರಚಿತ ಕವನ ವಾಚಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಮಾತನಾಡಿ, ಇಂತಹಾ ಸಂಘಗಳಿಂದ ವಿದ್ಯಾರ್ಥಿಗಳಲ್ಲಿ ವಿಚಾರ ಆಸಕ್ತಿ ಹಾಗೂ ಪ್ರತಿಭೆ ಹೊರಬರಲು ಕಾರಣವಾಗುತ್ತದೆ. ಇದೂ ಅಲ್ಲದೆ ವರ್ಷ ಸ್ಪರ್ಧೆ, ಭಿತ್ತಿ‌ಪತ್ರಿಕೆ ‌ಮೊದಲಾದವುಗಳ ಮೂಲಕ ಅವರನ್ನು ತೊಡಗಿಸಿಕೊಳ್ಳುವಂತೆ ಮಾಡುತ್ತೇವೆ ಎಂದರು.

ವೇದಿಕೆಯಲ್ಲಿ ಕಾಲೇಜಿನ ಉಪಪ್ರಾಂಶುಪಾಲ‌ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಡಾ. ರಾಜೇಶ್ ಬಿ ಉಪಸ್ಥಿತರಿದ್ದರು.
ಹಸೀನಾ ಮತ್ತು ಬಳಗದವರು ಪ್ರಾರ್ಥನೆ ಹಾಡಿದರು. ಸಂಕೇತ್ ಸ್ವಾಗತಿಸಿದರು. ಕುಶ ಅತಿಥಿ ಪರಿಚಯ ಮಾಡಿದರು. ಸಾಕ್ಷಿ ನಿರೂಪಿಸಿದರು. ತೇಜನ್ ವಂದಿಸಿದರು.

Related posts

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಜಮಾಬಂದಿ: ವಿವಿಧ ಯೋಜನೆಗಳಲ್ಲಿ ಶೇ 98.07 – 15ನೇ ಹಣಕಾಸು ಯೋಜನೆಯಲ್ಲಿ ಶೇ 67.14 ಪ್ರಗತಿ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸಯನ್ಸ್ ವಿಭಾಗದ ಸಹ ಪ್ರಾಧ್ಯಾಪಕ ಮನೋಜ್ ಗಡಿಯಾರ್ ಅವರಿಗೆ ಪಿ.ಎಚ್.ಡಿ. ಪದವಿ

Suddi Udaya

ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್.ಕೋಟ್ಯಾನ್‌ರಿಗೆ ಭಾಸ್ಕರಾಭಿನಂದನ ಕಾರ್ಯಕ್ರಮ, ಶಾಸಕ ಹರೀಶ್ ಪೂಂಜರವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!