April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಈ ಹಿಂದಿನ ಅವಧಿಯಲ್ಲಿ ವಿವಿಧ ಕಾಮಗಾರಿಯಲ್ಲಿ ದುರುಪಯೋಗವಾಗಿದೆ ಎಂಬ ಆರೋಪದ ದೂರಿನ ಹಿನ್ನಲೆಯಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ಜು.9 ಹಾಗೂ ಜು.10ರಂದು ಎರಡು ದಿನ ಇಂದಬೆಟ್ಟುವಿಗೆ ಆಗಮಿಸಿ ಕಡತ ಪರಿಶೀಲನೆ ಹಾಗೂ ಸ್ಥಳ ತನಿಖೆ ನಡೆಸಿದರು.


ಇಂದಬೆಟ್ಟು ನಿವಾಸಿ ಜಯರಾಮ ಗೌಡ ಅವರು ಇಂದಬೆಟ್ಟು ಗ್ರಾಮ ಪಂಚಾಯತದಲ್ಲಿ 2022-21 ಹಾಗೂ 2021-22ನೇ ಸಾಲಿನಲ್ಲಿ ಚರಂಡಿ, ಆರ್ತ್‌ವರ್ಕ್, ಮೋರಿ, ಸೇತುವೆ ಸೇರಿದಂತೆ ಸುಮಾರು 20 ಕಾಮಗಾರಿಗಳಲ್ಲಿ ದುರುಪಯೋಗವಾಗಿದೆ. ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಿಲ್ಲ, ಕಾಮಗಾರಿ ನಡೆಸದೆ ಬಿಲ್ಲುಗಳನ್ನು ಪಾಸ್ ಮಾಡಲಾಗಿದೆ. ಕಾಮಗಾರಿ ಸೂಚಿಸಿದ ಸ್ಥಳಗಳಲ್ಲಿ ನಡೆಸಿಲ್ಲ ಮೊದಲಾದ ಆರೋಪಗಳನ್ನು ಮಾಡಿ ತನಿಖೆಗೆ ನಡೆಸುವಂತೆ ಲೋಕಾಯುಕ್ತರಿಗೆ ಆಗಿನ ಪಿಡಿಒ ಸವಿತಾ, ಗ್ರಾ.ಪಂ ಅಧ್ಯಕ್ಷ ಅನಂದ ಅಡೀಲು, ಇಂಜಿನಿಯರ್ ಹರ್ಷಿತ್ ವಿರುದ್ಧ 2023 ಜೂನ್ ತಿಂಗಳಲ್ಲಿ ಬೆಂಗಳೂರು ಲೋಕಾಯಯಕ್ತರಿಗೆ ದೂರು ನೀಡಿದ್ದರು. ಅದಕ್ಕೆ ಮೊದಲು ಮಾಜಿ ಶಾಸಕ ವಸಂತ ಬಂಗೇರ ನೇತೃತ್ವದಲ್ಲಿ ಪಂಚಾಯತ್ ಎದುರು ಪ್ರತಿಭಟನೆ ಕೂಡ ನಡೆಸಲಾಗಿತ್ತು.


ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡು ಅಂತರಿಕ ತನಿಖೆ ನಡೆಸುತ್ತಿದ್ದರು. ಇದೀಗ ಜು.9 ರಂದು ಬೆಳಗ್ಗೆ ಬೆಂಗಳೂರು ಲೋಕಾಯುಕ್ತ ಕೇಂದ್ರ ಕಚೇರಿಯ ಹಿರಿಯ ಉಪ ನಿರ್ದೇಶಕರು ತಾಂತ್ರಿಕ ವಿಭಾಗದ ಇಂಜಿನಿಯರ್ ಪ್ರಕಾಶ್ ಬಣಕಾರ್ ಮತ್ತು ಸಹಾಯಕ ಇಂಜಿನಿಯರ್ ತೇಜಶ್ರೀ ಮತ್ತು ಮಂಗಳೂರು ಲೋಕಾಯುಕ್ತ ಕಚೇರಿಯ ಸಿಬ್ಬಂದಿಗಳ ನೇತೃತ್ವದ ತಂಡ ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಆಗಮಿಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು. ಮತ್ತೆ ಜು.10 ರಂದು ಇಂದಬೆಟ್ಟು ಗ್ರಾಮ ಪಂಚಾಯತ್ ಗೆ ಬಂದು ಸ್ಥಳ ತನಿಖೆ ನಡೆಸಿ ದೂರುದಾರ ಜಯರಾಮ್ ಬಂಗಾಡಿ ಜೊತೆ ದೂರು ನೀಡಿದ ಕಾಮಗಾರಿಗಳ ಪರಿಶೀಲನೆ ನಡೆಸಿ ಮಹಜರ್ ಮಾಡಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ಆನಂದ ಅಡೀಲು, ಈ ಹಿಂದಿನ ಪಿಡಿಒ ಸವಿತಾ ಬಿ.ಸಿ, ಇಂಜಿನಿಯರ್ ಹರ್ಷಿತ್ ಉಪಸ್ಥಿತರಿದ್ದರು.

Related posts

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಸಿದ್ಧಕಟ್ಟೆಯಲ್ಲಿ ರಸ್ತೆ ದಾಟುತ್ತಿದ್ದ ಗುಂಡೂರಿ ಗ್ರಾಮದ ಮಹಿಳೆಗೆ ಬೈಕ್ ಡಿಕ್ಕಿ; ಗಂಭೀರ ಗಾಯಗೊಂಡು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲು

Suddi Udaya

ಉಯ್ಯಾಲೆಯ ಹಗ್ಗ ಕುತ್ತಿಗೆಗೆ ಸಿಲುಕಿ ಬಾಲಕ ಸಾವು

Suddi Udaya

ರಾಷ್ಟ್ರೀಯ ಯೋಗಾಸನ ಕ್ರೀಡಾ ಒಕ್ಕೂಟದ ಉಪಾಧ್ಯಕ್ಷರಾಗಿ ಡಾ. ಐ. ಶಶಿಕಾಂತ ಜೈನ್

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya
error: Content is protected !!