April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

ಕಡಿರುದ್ಯಾವರ ಗ್ರಾಮದ ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ ಕಾರ್ಯಕ್ರಮ ಜು.10 ರಂದು ಜರಗಿತು.

ಆಲಂಬಾಡಿ ಪದ್ಮನಾಭ ತಂತ್ರಿ ಹಾಗೂ ಶಿಲ್ಪಿ ವೆಂಕಟ್ರಮಣ ಆಚಾರ್ಯ ಮರ್ಕಂಜ ಇವರ ಮಾರ್ಗದರ್ಶನದಲ್ಲಿ ಕಾನರ್ಪದ ವಿಕ್ರಂ ಹೊಳ್ಳರ ಪೌರೋಹಿತ್ಯದಲ್ಲಿ ರಮೇಶ್ ಶಿಲ್ಪಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರಗಿತು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವನದುರ್ಗದೇವಿ ಟ್ರಸ್ಟ್ ಗೌರವಾಧ್ಯಕ್ಷ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ವಹಿಸಿದ್ದರು.
ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ, ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸಗೌಡ ಕಡಿರುದ್ಯಾವರ ಗ್ರಾಪಂ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ, ಎಸ್ ಕೆ ಡಿ ಆರ್ ಡಿ ಪಿಯ ಮೇಲ್ವಿಚಾರಕ ಜನಾರ್ದನ ಉಪಸ್ಥಿತರಿದ್ದರು.


ಗೌರವ ಸಲಹೆಗಾರರಾದ ಪ್ರೇಮಾನಂದ ಫಡಕೆ, ಬಿ ಯಶೋಧರ ಬಲ್ಲಾಳ್ ಬಂಗಾಡಿ, ಟ್ರಸ್ಟ್ ನ ಕಾರ್ಯಕಾರಿ ಸಮಿತಿ ಸದಸ್ಯರಾದ ಸೀತಾರಾಮ ಕೊಡಪಟ್ಯ, ಲೋಕೇಶ್ ಗೌಡ ಶಾಂತಿದಡಿ,ಬಾಬು ನಾಯ್ಕ ಮಲ್ಲಡ್ಕ, ಕೃಷ್ಣಪ್ಪ ಪೂಜಾರಿ ಮಾನೋಡಿ, ಐತಪ್ಪ ಮಲೆಕುಡಿಯ,ಶ್ರೀಧರ ಗೌಡ , ಪ್ರಸಾದ್ ಗೌಡ,ದರ್ಣಪ್ಪ ಗೌಡ ಶೆಟ್ಟಿಪಾಲು, ಮಹಿಳಾ ಘಟಕದ ಅಧ್ಯಕ್ಷೆ ಸುರೇಖಾ ಮಂಜುನಾಥ್, ಕಾರ್ಯದರ್ಶಿ ನಳಿನಿ ಶ್ರೀಧರ ಗೌಡ,ಡೀಕಮ್ಮ, ಪ್ರಮುಖರಾದ ಕೆ. ಸತೀಶ್ ಕಾಮತ್,ವಳಂಬ್ರ ವಿನಯ ಚಂದ್ರ ಗೌಡ ಸಿರಿಬೈಲು ರಂಗನಾಥ ಹೆಬ್ಬಾರ್ ಮತ್ತಿತರರು ಭಾಗವಹಿಸಿದ್ದರು.


ಟ್ರಸ್ಟ್ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತಿ ಉದ್ದಾರ, ಭವ್ಯಶ್ರೀ ಕೀರ್ತಿರಾಜ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಕುಚ್ಚೂರು ಮಂಜುನಾಥ ಗೌಡ ವಂದಿಸಿದರು.
ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ರೂ. 50,000, ಹಾಗೂ ಬೆಳಾಲು ಶ್ರೀನಿವಾಸ ಗೌಡ ರೂ.25,000 ದೇಗುಲ ನಿರ್ಮಾಣಕ್ಕೆ ದೇಣಿಗೆ ನೀಡಿದರು.

Related posts

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಮಾ. 2: ಮುಗೇರಡ್ಕ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಮತ್ತು ಆಹಾರ ಮೇಳ: ಚಪ್ಪರ ಮೂಹೂರ್ತ

Suddi Udaya

ಲಾಯಿಲ ಪ್ರಸನ್ನ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!