25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

ಕಡಿರುದ್ಯಾವರ ಗ್ರಾಮದ ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ ಕಾರ್ಯಕ್ರಮ ಜು.10 ರಂದು ಜರಗಿತು.

ಆಲಂಬಾಡಿ ಪದ್ಮನಾಭ ತಂತ್ರಿ ಹಾಗೂ ಶಿಲ್ಪಿ ವೆಂಕಟ್ರಮಣ ಆಚಾರ್ಯ ಮರ್ಕಂಜ ಇವರ ಮಾರ್ಗದರ್ಶನದಲ್ಲಿ ಕಾನರ್ಪದ ವಿಕ್ರಂ ಹೊಳ್ಳರ ಪೌರೋಹಿತ್ಯದಲ್ಲಿ ರಮೇಶ್ ಶಿಲ್ಪಿ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರಗಿತು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವನದುರ್ಗದೇವಿ ಟ್ರಸ್ಟ್ ಗೌರವಾಧ್ಯಕ್ಷ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ವಹಿಸಿದ್ದರು.
ಶ್ರೀ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ, ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸಗೌಡ ಕಡಿರುದ್ಯಾವರ ಗ್ರಾಪಂ ಅಧ್ಯಕ್ಷೆ ರತ್ನಾವತಿ ಬಾಲಕೃಷ್ಣ ಗೌಡ, ಎಸ್ ಕೆ ಡಿ ಆರ್ ಡಿ ಪಿಯ ಮೇಲ್ವಿಚಾರಕ ಜನಾರ್ದನ ಉಪಸ್ಥಿತರಿದ್ದರು.


ಗೌರವ ಸಲಹೆಗಾರರಾದ ಪ್ರೇಮಾನಂದ ಫಡಕೆ, ಬಿ ಯಶೋಧರ ಬಲ್ಲಾಳ್ ಬಂಗಾಡಿ, ಟ್ರಸ್ಟ್ ನ ಕಾರ್ಯಕಾರಿ ಸಮಿತಿ ಸದಸ್ಯರಾದ ಸೀತಾರಾಮ ಕೊಡಪಟ್ಯ, ಲೋಕೇಶ್ ಗೌಡ ಶಾಂತಿದಡಿ,ಬಾಬು ನಾಯ್ಕ ಮಲ್ಲಡ್ಕ, ಕೃಷ್ಣಪ್ಪ ಪೂಜಾರಿ ಮಾನೋಡಿ, ಐತಪ್ಪ ಮಲೆಕುಡಿಯ,ಶ್ರೀಧರ ಗೌಡ , ಪ್ರಸಾದ್ ಗೌಡ,ದರ್ಣಪ್ಪ ಗೌಡ ಶೆಟ್ಟಿಪಾಲು, ಮಹಿಳಾ ಘಟಕದ ಅಧ್ಯಕ್ಷೆ ಸುರೇಖಾ ಮಂಜುನಾಥ್, ಕಾರ್ಯದರ್ಶಿ ನಳಿನಿ ಶ್ರೀಧರ ಗೌಡ,ಡೀಕಮ್ಮ, ಪ್ರಮುಖರಾದ ಕೆ. ಸತೀಶ್ ಕಾಮತ್,ವಳಂಬ್ರ ವಿನಯ ಚಂದ್ರ ಗೌಡ ಸಿರಿಬೈಲು ರಂಗನಾಥ ಹೆಬ್ಬಾರ್ ಮತ್ತಿತರರು ಭಾಗವಹಿಸಿದ್ದರು.


ಟ್ರಸ್ಟ್ ಅಧ್ಯಕ್ಷೆ ಲೋಕೇಶ್ವರಿ ವಿನಯಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಭಾರತಿ ಉದ್ದಾರ, ಭವ್ಯಶ್ರೀ ಕೀರ್ತಿರಾಜ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಕುಚ್ಚೂರು ಮಂಜುನಾಥ ಗೌಡ ವಂದಿಸಿದರು.
ಆರಿಕೋಡಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ರೂ. 50,000, ಹಾಗೂ ಬೆಳಾಲು ಶ್ರೀನಿವಾಸ ಗೌಡ ರೂ.25,000 ದೇಗುಲ ನಿರ್ಮಾಣಕ್ಕೆ ದೇಣಿಗೆ ನೀಡಿದರು.

Related posts

ಕಳೆಂಜ ಹಲ್ಲೆಗೊಳಗಾಗಿದ್ದ ರಾಜೇಶ್ ಎಂ.ಕೆ ಯವರ ಆರೋಗ್ಯ ವಿಚಾರಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್

Suddi Udaya

ವೇಣೂರು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಅಲಂಕೃತಗೊಂಡ ಮಚ್ಚಿನ ಶಾಲೆ ಹಾಗೂ ಪುಂಜಾಲಕಟ್ಟೆ ಶಾಲೆಯ ಮತದಾನ ಕೇಂದ್ರದಲ್ಲಿ ಬಿರುಸಿನ ಮತದಾನ

Suddi Udaya

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya
error: Content is protected !!