ಜು.17: ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳಿಂದ ತಪ್ತಮುದ್ರಾಧಾರಣೆ

Suddi Udaya

ಉಜಿರೆ: ಆಷಾಢ ಪ್ರಥಮೈಕಾದಶೀ ಪ್ರಯುಕ್ತ ಜು.17 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ ಸಹಯೋಗದೊಂದಿಗೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಗಳವರಿಂದ ಸುದರ್ಶನ ಹವನದಲ್ಲಿ ಶಂಖ ಚಕ್ರ ಮುದ್ರೆಯಿಂದ ತಪ್ತಮುದ್ರಾಧಾರಣೆ ನಡೆಯಲಿದೆ.


ಭಕ್ತಾದಿಗಳು ಶ್ರೀಗಳವರಿಂದ ಮುದ್ರಾಧಾರಣೆ ಹಾಕಿಸಿಕೊಳ್ಳಲು ಅವಕಾಶವಿದ್ದು, ಭಾಗವಹಿಸುವಂತೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!