25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

ಮಚ್ಚಿನ ರಸ್ತೆಯ ಬದಿಯಲ್ಲಿಯೇ ಸರ್ಕಾರಿ ಉನ್ನತೀಕರಿಸಿದ ಶಾಲೆ, ಸರಕಾರಿ ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಹಾಗೂ ನೂರಾರು ಮಕ್ಕಳು, ಸಾರ್ವಜನಿಕರು ಅಡ್ಡಾಡುವ ಸ್ಥಳವಾಗಿದ್ದು ಈ ಸ್ಥಳದಲ್ಲಿ ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ರಸ್ತೆದಾಟಲು ತೀರಾ ಕಷ್ಟ ಪಡುವಂತಾಗಿದೆ.

ಮಡಂತ್ಯಾರು-ಉಪ್ಪಿನಂಗಡಿ ಕಡೆಗೆ ಅತಿ ವೇಗದಲ್ಲಿ ಸಂಚರಿಸುವ ವಾಹನಗಳಿಂದ ರಸ್ತೆ ದಾಟುವುದೆ ಭಯದ ವಾತಾವರಣವಾಗಿದೆ ರಸ್ತೆಯ ಬದಿಯಲ್ಲಿ ಶಾಲೆಯ ಯಾವುದೇ ಸೂಚನಾ ಫಲಕವು ಇಲ್ಲದೆ ಇರುವುದರಿಂದ ವಾಹನ ಚಾಲಕರಿಗೂ ಅರಿವಿಗೆ ಬರದಂತಾಗುತ್ತಿದೆ. ಕಳೆದ ಒಂದು ಎರಡು ವರ್ಷಗಳ ಹಿಂದೆ ಇದೆ ವಿಷಯದ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಿಸಿದ ತಕ್ಷಣ ಸ್ಪಂದಿಸಿದ ಬಿಲ್ಲವ ಸಂಘ ಮಚ್ಚಿನ ಇದರ ವತಿಯಿಂದ ಉದ್ಧಾರ ಮನಸ್ಸಿನಿಂದ ಉಚಿತವಾಗಿ ಬ್ಯಾರಿಕೇಡ್ ಒದಗಿಸಿಕೊಟ್ಟರು. ಆದರೆ ಅತಿ ವೇಗದಲ್ಲಿ ಬರುವ ವಾಹನಗಳು ಡಿಕ್ಕಿ ಹೊಡೆದು ನಜ್ಜು ಗುಜ್ಜುಗಿತ್ತಾದರು ” ಇತ್ತೀಚೆಗೆ ಅದು ಮಾಯವಾಯಿತು”.

ಈ ರಸ್ತೆಯಲ್ಲಿ ಶಾಲಾ ಪಕ್ಕದಲ್ಲಿ ರಸ್ತೆ ತಿರುವು ಇರುವುದರಿಂದ ವಾಹನಗಳು ಬರುವುದೇ ಕಾಣದಂತಾಗಿದೆ. ಶಾಲಾ ಮಕ್ಕಳ ರಕ್ಷಣೆಗಾಗಿ ದೊಡ್ಡ ಅನಾಹುತ ಸಂಭವಿಸುವ ಮುನ್ನ ಶಾಲಾ ಎಸ್ ಡಿ ಎಂ ಸಿ ಸಮಿತಿ, ಗ್ರಾಮ ಪಂಚಾಯಿತಿ, ಪೋಲಿಸ್ ಇಲಾಖೆ ಇತ್ತ ಗಮನಹರಿಸಿ ಬ್ಯಾರಿಕೇಡ್ ಅಳವಡಿಸುವಂತೆ ಸಾರ್ವಜನಿಕರ ಬೇಡಿಕೆಯಾಗಿದೆ.

ವರದಿ: ಹರ್ಷ ಬಳ್ಳಮಂಜ

Related posts

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಉಜಿರೆ: “ಯಕ್ಷಸಿರಿ” ಪ್ರಶಸ್ತಿಗೆ ಆಯ್ಕೆಯಾದ ದಿವಾಕರ್ ದಾಸ್ ಕಾವಳಕಟ್ಟೆ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ ಕ್ರೀಡಾ ವಸತಿ ನಿಲಯದಲ್ಲಿ ವಾಸ್ತವ್ಯವಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ನಾಪತ್ತೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಮುಕ್ಕ ಶ್ರೀನಿವಾಸ್ ಯೂನಿವರ್ಸಿಟಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯಲ್ಲಿ ‘ಟೆಕ್ ಯುವ – 25’

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya
error: Content is protected !!