38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

ಮಚ್ಚಿನ ರಸ್ತೆಯ ಬದಿಯಲ್ಲಿಯೇ ಸರ್ಕಾರಿ ಉನ್ನತೀಕರಿಸಿದ ಶಾಲೆ, ಸರಕಾರಿ ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಹಾಗೂ ನೂರಾರು ಮಕ್ಕಳು, ಸಾರ್ವಜನಿಕರು ಅಡ್ಡಾಡುವ ಸ್ಥಳವಾಗಿದ್ದು ಈ ಸ್ಥಳದಲ್ಲಿ ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ರಸ್ತೆದಾಟಲು ತೀರಾ ಕಷ್ಟ ಪಡುವಂತಾಗಿದೆ.

ಮಡಂತ್ಯಾರು-ಉಪ್ಪಿನಂಗಡಿ ಕಡೆಗೆ ಅತಿ ವೇಗದಲ್ಲಿ ಸಂಚರಿಸುವ ವಾಹನಗಳಿಂದ ರಸ್ತೆ ದಾಟುವುದೆ ಭಯದ ವಾತಾವರಣವಾಗಿದೆ ರಸ್ತೆಯ ಬದಿಯಲ್ಲಿ ಶಾಲೆಯ ಯಾವುದೇ ಸೂಚನಾ ಫಲಕವು ಇಲ್ಲದೆ ಇರುವುದರಿಂದ ವಾಹನ ಚಾಲಕರಿಗೂ ಅರಿವಿಗೆ ಬರದಂತಾಗುತ್ತಿದೆ. ಕಳೆದ ಒಂದು ಎರಡು ವರ್ಷಗಳ ಹಿಂದೆ ಇದೆ ವಿಷಯದ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಿಸಿದ ತಕ್ಷಣ ಸ್ಪಂದಿಸಿದ ಬಿಲ್ಲವ ಸಂಘ ಮಚ್ಚಿನ ಇದರ ವತಿಯಿಂದ ಉದ್ಧಾರ ಮನಸ್ಸಿನಿಂದ ಉಚಿತವಾಗಿ ಬ್ಯಾರಿಕೇಡ್ ಒದಗಿಸಿಕೊಟ್ಟರು. ಆದರೆ ಅತಿ ವೇಗದಲ್ಲಿ ಬರುವ ವಾಹನಗಳು ಡಿಕ್ಕಿ ಹೊಡೆದು ನಜ್ಜು ಗುಜ್ಜುಗಿತ್ತಾದರು ” ಇತ್ತೀಚೆಗೆ ಅದು ಮಾಯವಾಯಿತು”.

ಈ ರಸ್ತೆಯಲ್ಲಿ ಶಾಲಾ ಪಕ್ಕದಲ್ಲಿ ರಸ್ತೆ ತಿರುವು ಇರುವುದರಿಂದ ವಾಹನಗಳು ಬರುವುದೇ ಕಾಣದಂತಾಗಿದೆ. ಶಾಲಾ ಮಕ್ಕಳ ರಕ್ಷಣೆಗಾಗಿ ದೊಡ್ಡ ಅನಾಹುತ ಸಂಭವಿಸುವ ಮುನ್ನ ಶಾಲಾ ಎಸ್ ಡಿ ಎಂ ಸಿ ಸಮಿತಿ, ಗ್ರಾಮ ಪಂಚಾಯಿತಿ, ಪೋಲಿಸ್ ಇಲಾಖೆ ಇತ್ತ ಗಮನಹರಿಸಿ ಬ್ಯಾರಿಕೇಡ್ ಅಳವಡಿಸುವಂತೆ ಸಾರ್ವಜನಿಕರ ಬೇಡಿಕೆಯಾಗಿದೆ.

ವರದಿ: ಹರ್ಷ ಬಳ್ಳಮಂಜ

Related posts

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಕೋಟಿ- ಚೆನ್ನಯ ಕ್ರೀಡಾಕೂಟ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುಕ್ಕೇಡಿ ನಿಟ್ಟಡೆ ಸಮಗ್ರ ಚಾಂಪಿಯನ್

Suddi Udaya
error: Content is protected !!