April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

ಮಚ್ಚಿನ ರಸ್ತೆಯ ಬದಿಯಲ್ಲಿಯೇ ಸರ್ಕಾರಿ ಉನ್ನತೀಕರಿಸಿದ ಶಾಲೆ, ಸರಕಾರಿ ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಹಾಗೂ ನೂರಾರು ಮಕ್ಕಳು, ಸಾರ್ವಜನಿಕರು ಅಡ್ಡಾಡುವ ಸ್ಥಳವಾಗಿದ್ದು ಈ ಸ್ಥಳದಲ್ಲಿ ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ರಸ್ತೆದಾಟಲು ತೀರಾ ಕಷ್ಟ ಪಡುವಂತಾಗಿದೆ.

ಮಡಂತ್ಯಾರು-ಉಪ್ಪಿನಂಗಡಿ ಕಡೆಗೆ ಅತಿ ವೇಗದಲ್ಲಿ ಸಂಚರಿಸುವ ವಾಹನಗಳಿಂದ ರಸ್ತೆ ದಾಟುವುದೆ ಭಯದ ವಾತಾವರಣವಾಗಿದೆ ರಸ್ತೆಯ ಬದಿಯಲ್ಲಿ ಶಾಲೆಯ ಯಾವುದೇ ಸೂಚನಾ ಫಲಕವು ಇಲ್ಲದೆ ಇರುವುದರಿಂದ ವಾಹನ ಚಾಲಕರಿಗೂ ಅರಿವಿಗೆ ಬರದಂತಾಗುತ್ತಿದೆ. ಕಳೆದ ಒಂದು ಎರಡು ವರ್ಷಗಳ ಹಿಂದೆ ಇದೆ ವಿಷಯದ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಿಸಿದ ತಕ್ಷಣ ಸ್ಪಂದಿಸಿದ ಬಿಲ್ಲವ ಸಂಘ ಮಚ್ಚಿನ ಇದರ ವತಿಯಿಂದ ಉದ್ಧಾರ ಮನಸ್ಸಿನಿಂದ ಉಚಿತವಾಗಿ ಬ್ಯಾರಿಕೇಡ್ ಒದಗಿಸಿಕೊಟ್ಟರು. ಆದರೆ ಅತಿ ವೇಗದಲ್ಲಿ ಬರುವ ವಾಹನಗಳು ಡಿಕ್ಕಿ ಹೊಡೆದು ನಜ್ಜು ಗುಜ್ಜುಗಿತ್ತಾದರು ” ಇತ್ತೀಚೆಗೆ ಅದು ಮಾಯವಾಯಿತು”.

ಈ ರಸ್ತೆಯಲ್ಲಿ ಶಾಲಾ ಪಕ್ಕದಲ್ಲಿ ರಸ್ತೆ ತಿರುವು ಇರುವುದರಿಂದ ವಾಹನಗಳು ಬರುವುದೇ ಕಾಣದಂತಾಗಿದೆ. ಶಾಲಾ ಮಕ್ಕಳ ರಕ್ಷಣೆಗಾಗಿ ದೊಡ್ಡ ಅನಾಹುತ ಸಂಭವಿಸುವ ಮುನ್ನ ಶಾಲಾ ಎಸ್ ಡಿ ಎಂ ಸಿ ಸಮಿತಿ, ಗ್ರಾಮ ಪಂಚಾಯಿತಿ, ಪೋಲಿಸ್ ಇಲಾಖೆ ಇತ್ತ ಗಮನಹರಿಸಿ ಬ್ಯಾರಿಕೇಡ್ ಅಳವಡಿಸುವಂತೆ ಸಾರ್ವಜನಿಕರ ಬೇಡಿಕೆಯಾಗಿದೆ.

ವರದಿ: ಹರ್ಷ ಬಳ್ಳಮಂಜ

Related posts

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮಡಂತ್ಯಾರು ಶಾಖೆ ವತಿಯಿಂದ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಈ-ಹುಂಡಿ ಸಮರ್ಪಣೆ

Suddi Udaya

ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ

Suddi Udaya

ಸುನ್ನೀ ಮ್ಯಾನೇಜ್ ಮೆಂಟ್ ಅಸೋಶಿಯೇಷನ್ ನ ಬೆಳ್ತಂಗಡಿ ರೀಜಿನಲ್ ಇದರ ವಾರ್ಷಿಕ ಕೌನ್ಸಿಲ್

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya
error: Content is protected !!