25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

ಮಚ್ಚಿನ ರಸ್ತೆಯ ಬದಿಯಲ್ಲಿಯೇ ಸರ್ಕಾರಿ ಉನ್ನತೀಕರಿಸಿದ ಶಾಲೆ, ಸರಕಾರಿ ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಹಾಗೂ ನೂರಾರು ಮಕ್ಕಳು, ಸಾರ್ವಜನಿಕರು ಅಡ್ಡಾಡುವ ಸ್ಥಳವಾಗಿದ್ದು ಈ ಸ್ಥಳದಲ್ಲಿ ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ರಸ್ತೆದಾಟಲು ತೀರಾ ಕಷ್ಟ ಪಡುವಂತಾಗಿದೆ.

ಮಡಂತ್ಯಾರು-ಉಪ್ಪಿನಂಗಡಿ ಕಡೆಗೆ ಅತಿ ವೇಗದಲ್ಲಿ ಸಂಚರಿಸುವ ವಾಹನಗಳಿಂದ ರಸ್ತೆ ದಾಟುವುದೆ ಭಯದ ವಾತಾವರಣವಾಗಿದೆ ರಸ್ತೆಯ ಬದಿಯಲ್ಲಿ ಶಾಲೆಯ ಯಾವುದೇ ಸೂಚನಾ ಫಲಕವು ಇಲ್ಲದೆ ಇರುವುದರಿಂದ ವಾಹನ ಚಾಲಕರಿಗೂ ಅರಿವಿಗೆ ಬರದಂತಾಗುತ್ತಿದೆ. ಕಳೆದ ಒಂದು ಎರಡು ವರ್ಷಗಳ ಹಿಂದೆ ಇದೆ ವಿಷಯದ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಿಸಿದ ತಕ್ಷಣ ಸ್ಪಂದಿಸಿದ ಬಿಲ್ಲವ ಸಂಘ ಮಚ್ಚಿನ ಇದರ ವತಿಯಿಂದ ಉದ್ಧಾರ ಮನಸ್ಸಿನಿಂದ ಉಚಿತವಾಗಿ ಬ್ಯಾರಿಕೇಡ್ ಒದಗಿಸಿಕೊಟ್ಟರು. ಆದರೆ ಅತಿ ವೇಗದಲ್ಲಿ ಬರುವ ವಾಹನಗಳು ಡಿಕ್ಕಿ ಹೊಡೆದು ನಜ್ಜು ಗುಜ್ಜುಗಿತ್ತಾದರು ” ಇತ್ತೀಚೆಗೆ ಅದು ಮಾಯವಾಯಿತು”.

ಈ ರಸ್ತೆಯಲ್ಲಿ ಶಾಲಾ ಪಕ್ಕದಲ್ಲಿ ರಸ್ತೆ ತಿರುವು ಇರುವುದರಿಂದ ವಾಹನಗಳು ಬರುವುದೇ ಕಾಣದಂತಾಗಿದೆ. ಶಾಲಾ ಮಕ್ಕಳ ರಕ್ಷಣೆಗಾಗಿ ದೊಡ್ಡ ಅನಾಹುತ ಸಂಭವಿಸುವ ಮುನ್ನ ಶಾಲಾ ಎಸ್ ಡಿ ಎಂ ಸಿ ಸಮಿತಿ, ಗ್ರಾಮ ಪಂಚಾಯಿತಿ, ಪೋಲಿಸ್ ಇಲಾಖೆ ಇತ್ತ ಗಮನಹರಿಸಿ ಬ್ಯಾರಿಕೇಡ್ ಅಳವಡಿಸುವಂತೆ ಸಾರ್ವಜನಿಕರ ಬೇಡಿಕೆಯಾಗಿದೆ.

ವರದಿ: ಹರ್ಷ ಬಳ್ಳಮಂಜ

Related posts

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನಕ್ಕೆ ಶಿವಪ್ಪ ಪೂಜಾರಿ ಕುಟುಂಬಸ್ಥರಿಂದ “ಬೆಳ್ಳಿಯ ಹೂವಿನ” ಮಾಲೆ ಸಮರ್ಪಣೆ

Suddi Udaya

ಹಿಂದೂ ಕಮಿಟಿ ಹಾರ್ಝಿಲಿಯ ಇಸ್ರೇಲ್ ಸಂಘಟನೆಯಿಂದ ವೈದ್ಯಕೀಯ ನೆರವು ಹಸ್ತಾಂತರ-ಅಶಕ್ತ ಕುಟುಂಬಕ್ಕೆ ಆರ್ಥಿಕ ಸಹಕಾರ

Suddi Udaya

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya
error: Content is protected !!