July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

ಮಚ್ಚಿನ ರಸ್ತೆಯ ಬದಿಯಲ್ಲಿಯೇ ಸರ್ಕಾರಿ ಉನ್ನತೀಕರಿಸಿದ ಶಾಲೆ, ಸರಕಾರಿ ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಹಾಗೂ ನೂರಾರು ಮಕ್ಕಳು, ಸಾರ್ವಜನಿಕರು ಅಡ್ಡಾಡುವ ಸ್ಥಳವಾಗಿದ್ದು ಈ ಸ್ಥಳದಲ್ಲಿ ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ರಸ್ತೆದಾಟಲು ತೀರಾ ಕಷ್ಟ ಪಡುವಂತಾಗಿದೆ.

ಮಡಂತ್ಯಾರು-ಉಪ್ಪಿನಂಗಡಿ ಕಡೆಗೆ ಅತಿ ವೇಗದಲ್ಲಿ ಸಂಚರಿಸುವ ವಾಹನಗಳಿಂದ ರಸ್ತೆ ದಾಟುವುದೆ ಭಯದ ವಾತಾವರಣವಾಗಿದೆ ರಸ್ತೆಯ ಬದಿಯಲ್ಲಿ ಶಾಲೆಯ ಯಾವುದೇ ಸೂಚನಾ ಫಲಕವು ಇಲ್ಲದೆ ಇರುವುದರಿಂದ ವಾಹನ ಚಾಲಕರಿಗೂ ಅರಿವಿಗೆ ಬರದಂತಾಗುತ್ತಿದೆ. ಕಳೆದ ಒಂದು ಎರಡು ವರ್ಷಗಳ ಹಿಂದೆ ಇದೆ ವಿಷಯದ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಿಸಿದ ತಕ್ಷಣ ಸ್ಪಂದಿಸಿದ ಬಿಲ್ಲವ ಸಂಘ ಮಚ್ಚಿನ ಇದರ ವತಿಯಿಂದ ಉದ್ಧಾರ ಮನಸ್ಸಿನಿಂದ ಉಚಿತವಾಗಿ ಬ್ಯಾರಿಕೇಡ್ ಒದಗಿಸಿಕೊಟ್ಟರು. ಆದರೆ ಅತಿ ವೇಗದಲ್ಲಿ ಬರುವ ವಾಹನಗಳು ಡಿಕ್ಕಿ ಹೊಡೆದು ನಜ್ಜು ಗುಜ್ಜುಗಿತ್ತಾದರು ” ಇತ್ತೀಚೆಗೆ ಅದು ಮಾಯವಾಯಿತು”.

ಈ ರಸ್ತೆಯಲ್ಲಿ ಶಾಲಾ ಪಕ್ಕದಲ್ಲಿ ರಸ್ತೆ ತಿರುವು ಇರುವುದರಿಂದ ವಾಹನಗಳು ಬರುವುದೇ ಕಾಣದಂತಾಗಿದೆ. ಶಾಲಾ ಮಕ್ಕಳ ರಕ್ಷಣೆಗಾಗಿ ದೊಡ್ಡ ಅನಾಹುತ ಸಂಭವಿಸುವ ಮುನ್ನ ಶಾಲಾ ಎಸ್ ಡಿ ಎಂ ಸಿ ಸಮಿತಿ, ಗ್ರಾಮ ಪಂಚಾಯಿತಿ, ಪೋಲಿಸ್ ಇಲಾಖೆ ಇತ್ತ ಗಮನಹರಿಸಿ ಬ್ಯಾರಿಕೇಡ್ ಅಳವಡಿಸುವಂತೆ ಸಾರ್ವಜನಿಕರ ಬೇಡಿಕೆಯಾಗಿದೆ.

ವರದಿ: ಹರ್ಷ ಬಳ್ಳಮಂಜ

Related posts

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಬಂದಾರು-ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ: ಗೊನೆ ಮುಹೂರ್ತ, ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಎಕ್ಸೆಲ್ ನ ವಿದ್ಯಾರ್ಥಿಗಳಿಗೆ ಎ.ಎಂ.ಇ.ಸಿ.ಇ.ಟಿ ಯಲ್ಲಿ ರ್‍ಯಾಂಕ್

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕಳೆoಜ ಗ್ರಾಮಸ್ಥರ ಮನವಿಗೆ ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ : ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

Suddi Udaya
error: Content is protected !!