25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

ಮಚ್ಚಿನ ರಸ್ತೆಯ ಬದಿಯಲ್ಲಿಯೇ ಸರ್ಕಾರಿ ಉನ್ನತೀಕರಿಸಿದ ಶಾಲೆ, ಸರಕಾರಿ ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಹಾಗೂ ನೂರಾರು ಮಕ್ಕಳು, ಸಾರ್ವಜನಿಕರು ಅಡ್ಡಾಡುವ ಸ್ಥಳವಾಗಿದ್ದು ಈ ಸ್ಥಳದಲ್ಲಿ ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ರಸ್ತೆದಾಟಲು ತೀರಾ ಕಷ್ಟ ಪಡುವಂತಾಗಿದೆ.

ಮಡಂತ್ಯಾರು-ಉಪ್ಪಿನಂಗಡಿ ಕಡೆಗೆ ಅತಿ ವೇಗದಲ್ಲಿ ಸಂಚರಿಸುವ ವಾಹನಗಳಿಂದ ರಸ್ತೆ ದಾಟುವುದೆ ಭಯದ ವಾತಾವರಣವಾಗಿದೆ ರಸ್ತೆಯ ಬದಿಯಲ್ಲಿ ಶಾಲೆಯ ಯಾವುದೇ ಸೂಚನಾ ಫಲಕವು ಇಲ್ಲದೆ ಇರುವುದರಿಂದ ವಾಹನ ಚಾಲಕರಿಗೂ ಅರಿವಿಗೆ ಬರದಂತಾಗುತ್ತಿದೆ. ಕಳೆದ ಒಂದು ಎರಡು ವರ್ಷಗಳ ಹಿಂದೆ ಇದೆ ವಿಷಯದ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಿಸಿದ ತಕ್ಷಣ ಸ್ಪಂದಿಸಿದ ಬಿಲ್ಲವ ಸಂಘ ಮಚ್ಚಿನ ಇದರ ವತಿಯಿಂದ ಉದ್ಧಾರ ಮನಸ್ಸಿನಿಂದ ಉಚಿತವಾಗಿ ಬ್ಯಾರಿಕೇಡ್ ಒದಗಿಸಿಕೊಟ್ಟರು. ಆದರೆ ಅತಿ ವೇಗದಲ್ಲಿ ಬರುವ ವಾಹನಗಳು ಡಿಕ್ಕಿ ಹೊಡೆದು ನಜ್ಜು ಗುಜ್ಜುಗಿತ್ತಾದರು ” ಇತ್ತೀಚೆಗೆ ಅದು ಮಾಯವಾಯಿತು”.

ಈ ರಸ್ತೆಯಲ್ಲಿ ಶಾಲಾ ಪಕ್ಕದಲ್ಲಿ ರಸ್ತೆ ತಿರುವು ಇರುವುದರಿಂದ ವಾಹನಗಳು ಬರುವುದೇ ಕಾಣದಂತಾಗಿದೆ. ಶಾಲಾ ಮಕ್ಕಳ ರಕ್ಷಣೆಗಾಗಿ ದೊಡ್ಡ ಅನಾಹುತ ಸಂಭವಿಸುವ ಮುನ್ನ ಶಾಲಾ ಎಸ್ ಡಿ ಎಂ ಸಿ ಸಮಿತಿ, ಗ್ರಾಮ ಪಂಚಾಯಿತಿ, ಪೋಲಿಸ್ ಇಲಾಖೆ ಇತ್ತ ಗಮನಹರಿಸಿ ಬ್ಯಾರಿಕೇಡ್ ಅಳವಡಿಸುವಂತೆ ಸಾರ್ವಜನಿಕರ ಬೇಡಿಕೆಯಾಗಿದೆ.

ವರದಿ: ಹರ್ಷ ಬಳ್ಳಮಂಜ

Related posts

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಭವ್ಯ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya
error: Content is protected !!