23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

ಮಚ್ಚಿನ ರಸ್ತೆಯ ಬದಿಯಲ್ಲಿಯೇ ಸರ್ಕಾರಿ ಉನ್ನತೀಕರಿಸಿದ ಶಾಲೆ, ಸರಕಾರಿ ಪ್ರೌಢಶಾಲೆ, ಅಂಗನವಾಡಿ ಕೇಂದ್ರ ಹಾಗೂ ನೂರಾರು ಮಕ್ಕಳು, ಸಾರ್ವಜನಿಕರು ಅಡ್ಡಾಡುವ ಸ್ಥಳವಾಗಿದ್ದು ಈ ಸ್ಥಳದಲ್ಲಿ ಶಾಲೆ ಬಿಡುವ ಸಮಯದಲ್ಲಿ ಮಕ್ಕಳು ರಸ್ತೆದಾಟಲು ತೀರಾ ಕಷ್ಟ ಪಡುವಂತಾಗಿದೆ.

ಮಡಂತ್ಯಾರು-ಉಪ್ಪಿನಂಗಡಿ ಕಡೆಗೆ ಅತಿ ವೇಗದಲ್ಲಿ ಸಂಚರಿಸುವ ವಾಹನಗಳಿಂದ ರಸ್ತೆ ದಾಟುವುದೆ ಭಯದ ವಾತಾವರಣವಾಗಿದೆ ರಸ್ತೆಯ ಬದಿಯಲ್ಲಿ ಶಾಲೆಯ ಯಾವುದೇ ಸೂಚನಾ ಫಲಕವು ಇಲ್ಲದೆ ಇರುವುದರಿಂದ ವಾಹನ ಚಾಲಕರಿಗೂ ಅರಿವಿಗೆ ಬರದಂತಾಗುತ್ತಿದೆ. ಕಳೆದ ಒಂದು ಎರಡು ವರ್ಷಗಳ ಹಿಂದೆ ಇದೆ ವಿಷಯದ ಬಗ್ಗೆ ಪತ್ರಿಕೆಯಲ್ಲಿ ಪ್ರಕಟಿಸಿದ ತಕ್ಷಣ ಸ್ಪಂದಿಸಿದ ಬಿಲ್ಲವ ಸಂಘ ಮಚ್ಚಿನ ಇದರ ವತಿಯಿಂದ ಉದ್ಧಾರ ಮನಸ್ಸಿನಿಂದ ಉಚಿತವಾಗಿ ಬ್ಯಾರಿಕೇಡ್ ಒದಗಿಸಿಕೊಟ್ಟರು. ಆದರೆ ಅತಿ ವೇಗದಲ್ಲಿ ಬರುವ ವಾಹನಗಳು ಡಿಕ್ಕಿ ಹೊಡೆದು ನಜ್ಜು ಗುಜ್ಜುಗಿತ್ತಾದರು ” ಇತ್ತೀಚೆಗೆ ಅದು ಮಾಯವಾಯಿತು”.

ಈ ರಸ್ತೆಯಲ್ಲಿ ಶಾಲಾ ಪಕ್ಕದಲ್ಲಿ ರಸ್ತೆ ತಿರುವು ಇರುವುದರಿಂದ ವಾಹನಗಳು ಬರುವುದೇ ಕಾಣದಂತಾಗಿದೆ. ಶಾಲಾ ಮಕ್ಕಳ ರಕ್ಷಣೆಗಾಗಿ ದೊಡ್ಡ ಅನಾಹುತ ಸಂಭವಿಸುವ ಮುನ್ನ ಶಾಲಾ ಎಸ್ ಡಿ ಎಂ ಸಿ ಸಮಿತಿ, ಗ್ರಾಮ ಪಂಚಾಯಿತಿ, ಪೋಲಿಸ್ ಇಲಾಖೆ ಇತ್ತ ಗಮನಹರಿಸಿ ಬ್ಯಾರಿಕೇಡ್ ಅಳವಡಿಸುವಂತೆ ಸಾರ್ವಜನಿಕರ ಬೇಡಿಕೆಯಾಗಿದೆ.

ವರದಿ: ಹರ್ಷ ಬಳ್ಳಮಂಜ

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಕುತೂಹಲ ಕೆರಳಿಸಿದ ಮಾಲಾಡಿ ಗ್ರಾ. ಪಂ. ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜಿದ್ದಾಜಿದ್ದಿನ ಪೈಪೋಟಿ,: ಅಧ್ಯಕ್ಷರಾಗಿ ಪುನೀತ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ‍ಸೆಲೆಸ್ಟಿನ್ ಡಿಸೋಜ ಆಯ್ಕೆ

Suddi Udaya

ಧರ್ಮಸ್ಥಳ: ಕಂಚಿಮಾರು ನಿವಾಸಿ ರತ್ನಮ್ಮ ಜೈನ್ ನಿಧನ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya
error: Content is protected !!