July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

ಹೊಸಂಗಡಿ : ಹೊಸಂಗಡಿ ಗ್ರಾಮ ಪಂಚಾಯತದ 2024-25ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಜು.11ರಂದು ಗ್ರಾ. ಪಂ. ಅಧ್ಯಕ್ಷ ಜಗದೀಶ್ ಹೆಗ್ಡೆ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕ ಇಲಾಖಾ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ತಿನ್ನುವ ಆಹಾರ ಕಳಪೆ ಆಗಬಾರದು, ಹೋಟೆಲ್ ಗಳಲ್ಲಿ ಕಳಪೆ ಮಟ್ಟದ ಎಣ್ಣೆಗಳನ್ನು ಆಹಾರಗಳಿಗೆ ಬಳಸುತ್ತಿದ್ದಾರೆ. ಇದನ್ನು ನಿಲ್ಲಿಸಬೇಕು. ಹಾಗೂ ಕಳಪೆ ಮಟ್ಟದ ತುಪ್ಪ ಈ ಪ್ರದೇಶದಲ್ಲಿ ಮಾರಾಟ ಆಗುತ್ತಿದೆ ಇದು ಆರೋಗ್ಯಕ್ಕೆ ನೇರ ಪರಿಣಾಮ ಬೀರುತ್ತಿದೆ. ಹೊಸಂಗಡಿಯ ಎಷ್ಟೋ ಹೋಟೆಲ್ ಗಳಲ್ಲಿ ಬಚ್ಚಲು ಗುಂಡಿಗಳಿಲ್ಲ ಎಂದು ಗ್ರಾಮಸ್ಥ ಸತೀಶ್ ಆರೋಪಿದರು.

ಶಾಲೆಗಳಲ್ಲಿ ಅಡುಗೆ ಕೆಲಸದ ಮಹಿಳೆಯರಿಗೆ ಕೊಡುವ ವೇತನ ಸಾಕಾಗುವುದಿಲ್ಲ, ವೇತನ ಹೆಚ್ಚಿಸಬೇಕು. ಬಡಕೋಡಿ ಸರಕಾರಿ ಶಾಲೆಗೆ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಕ್ಕೆ ಗ್ರಾಮಸ್ಥರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಗ್ರಹಿಸಿದರು.

2023-24ನೇ ಸಾಲಿನ ಪಂಚಾಯತ್ ನಿಧಿಯಿಂದ ಪ. ಜಾತಿ ಪ. ಪಂಗಡದ ನೂರಕ್ಕಿಂತಲೂ ಅಧಿಕ ಕುಟುಂಬಗಳಿಗೆ ನೀರಿನ ಡ್ರಮ್ ನೀಡಲಾಯಿತು.

ಪಂಚಾಯತ್‌ ಉಪಾಧ್ಯಕ್ಷೆ ಶ್ರೀಮತಿ ಶಾಂತ, ಪಂಚಾಯತ್‌ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಿಬ್ಬಂದಿಗಳು, ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಕಾರ್ಯದರ್ಶಿ ಕಾಂತಪ್ಪ ಸ್ವಾಗತಿಸಿ, ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಜಮಾ ಖರ್ಚು ಮತ್ತು ಅನುಪಾಲನ ವರದಿ ವಾಚಿಸಿ, ಧನ್ಯವಾದಗೈದರು.

Related posts

ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಕೌಶಿಕ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ನೆರಿಯ: ಅಣಿಯೂರು ನಿವಾಸಿ ಇಂದಿರಾ ನಿಧನ

Suddi Udaya

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

Suddi Udaya

ಸಿರಿ ಸಂಸ್ಥೆಯಲ್ಲಿ ವಿಜಯವಾಣಿ ವಿಜಯೋತ್ಸವ ಕೂಪನ್ ಬಿಡುಗಡೆ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ನಿಡಿಗಲ್ ಹಯಾತುಲ್ ಇಸ್ಲಾಂ ಬದ್ರಿಯಾ ಜುಮ್ಮಾ ಮಸೀದಿ ಮಹಾಸಭೆ: ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಷಾ ಆಯ್ಕೆ

Suddi Udaya
error: Content is protected !!