25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

ಹೊಸಂಗಡಿ : ಹೊಸಂಗಡಿ ಗ್ರಾಮ ಪಂಚಾಯತದ 2024-25ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಜು.11ರಂದು ಗ್ರಾ. ಪಂ. ಅಧ್ಯಕ್ಷ ಜಗದೀಶ್ ಹೆಗ್ಡೆ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕ ಇಲಾಖಾ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ತಿನ್ನುವ ಆಹಾರ ಕಳಪೆ ಆಗಬಾರದು, ಹೋಟೆಲ್ ಗಳಲ್ಲಿ ಕಳಪೆ ಮಟ್ಟದ ಎಣ್ಣೆಗಳನ್ನು ಆಹಾರಗಳಿಗೆ ಬಳಸುತ್ತಿದ್ದಾರೆ. ಇದನ್ನು ನಿಲ್ಲಿಸಬೇಕು. ಹಾಗೂ ಕಳಪೆ ಮಟ್ಟದ ತುಪ್ಪ ಈ ಪ್ರದೇಶದಲ್ಲಿ ಮಾರಾಟ ಆಗುತ್ತಿದೆ ಇದು ಆರೋಗ್ಯಕ್ಕೆ ನೇರ ಪರಿಣಾಮ ಬೀರುತ್ತಿದೆ. ಹೊಸಂಗಡಿಯ ಎಷ್ಟೋ ಹೋಟೆಲ್ ಗಳಲ್ಲಿ ಬಚ್ಚಲು ಗುಂಡಿಗಳಿಲ್ಲ ಎಂದು ಗ್ರಾಮಸ್ಥ ಸತೀಶ್ ಆರೋಪಿದರು.

ಶಾಲೆಗಳಲ್ಲಿ ಅಡುಗೆ ಕೆಲಸದ ಮಹಿಳೆಯರಿಗೆ ಕೊಡುವ ವೇತನ ಸಾಕಾಗುವುದಿಲ್ಲ, ವೇತನ ಹೆಚ್ಚಿಸಬೇಕು. ಬಡಕೋಡಿ ಸರಕಾರಿ ಶಾಲೆಗೆ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಕ್ಕೆ ಗ್ರಾಮಸ್ಥರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಗ್ರಹಿಸಿದರು.

2023-24ನೇ ಸಾಲಿನ ಪಂಚಾಯತ್ ನಿಧಿಯಿಂದ ಪ. ಜಾತಿ ಪ. ಪಂಗಡದ ನೂರಕ್ಕಿಂತಲೂ ಅಧಿಕ ಕುಟುಂಬಗಳಿಗೆ ನೀರಿನ ಡ್ರಮ್ ನೀಡಲಾಯಿತು.

ಪಂಚಾಯತ್‌ ಉಪಾಧ್ಯಕ್ಷೆ ಶ್ರೀಮತಿ ಶಾಂತ, ಪಂಚಾಯತ್‌ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಿಬ್ಬಂದಿಗಳು, ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಕಾರ್ಯದರ್ಶಿ ಕಾಂತಪ್ಪ ಸ್ವಾಗತಿಸಿ, ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಜಮಾ ಖರ್ಚು ಮತ್ತು ಅನುಪಾಲನ ವರದಿ ವಾಚಿಸಿ, ಧನ್ಯವಾದಗೈದರು.

Related posts

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಹಾಗೂ ಶ್ರೀ ದುರ್ಗಾಗಣೇಶ ಸಭಾಭವನದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಕಳೆಂಜ ರಾಜೇಶ್ ಎಂ.ಕೆ ಯವರ ಹಲ್ಲೆ ಪ್ರಕರಣ: ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲು: ಸ್ಥಳಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕ ಆರ್ ಅಶೋಕ್

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿಯ ಷಷ್ಠಿ ಮಹೋತ್ಸವ: ಸ್ವರ್ಣ ಅಟ್ಟೆ ಪ್ರಭಾವಳಿ ಸಮರ್ಪಣೆ

Suddi Udaya
error: Content is protected !!