September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

ಹೊಸಂಗಡಿ : ಹೊಸಂಗಡಿ ಗ್ರಾಮ ಪಂಚಾಯತದ 2024-25ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಜು.11ರಂದು ಗ್ರಾ. ಪಂ. ಅಧ್ಯಕ್ಷ ಜಗದೀಶ್ ಹೆಗ್ಡೆ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕ ಇಲಾಖಾ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ತಿನ್ನುವ ಆಹಾರ ಕಳಪೆ ಆಗಬಾರದು, ಹೋಟೆಲ್ ಗಳಲ್ಲಿ ಕಳಪೆ ಮಟ್ಟದ ಎಣ್ಣೆಗಳನ್ನು ಆಹಾರಗಳಿಗೆ ಬಳಸುತ್ತಿದ್ದಾರೆ. ಇದನ್ನು ನಿಲ್ಲಿಸಬೇಕು. ಹಾಗೂ ಕಳಪೆ ಮಟ್ಟದ ತುಪ್ಪ ಈ ಪ್ರದೇಶದಲ್ಲಿ ಮಾರಾಟ ಆಗುತ್ತಿದೆ ಇದು ಆರೋಗ್ಯಕ್ಕೆ ನೇರ ಪರಿಣಾಮ ಬೀರುತ್ತಿದೆ. ಹೊಸಂಗಡಿಯ ಎಷ್ಟೋ ಹೋಟೆಲ್ ಗಳಲ್ಲಿ ಬಚ್ಚಲು ಗುಂಡಿಗಳಿಲ್ಲ ಎಂದು ಗ್ರಾಮಸ್ಥ ಸತೀಶ್ ಆರೋಪಿದರು.

ಶಾಲೆಗಳಲ್ಲಿ ಅಡುಗೆ ಕೆಲಸದ ಮಹಿಳೆಯರಿಗೆ ಕೊಡುವ ವೇತನ ಸಾಕಾಗುವುದಿಲ್ಲ, ವೇತನ ಹೆಚ್ಚಿಸಬೇಕು. ಬಡಕೋಡಿ ಸರಕಾರಿ ಶಾಲೆಗೆ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಕ್ಕೆ ಗ್ರಾಮಸ್ಥರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಗ್ರಹಿಸಿದರು.

2023-24ನೇ ಸಾಲಿನ ಪಂಚಾಯತ್ ನಿಧಿಯಿಂದ ಪ. ಜಾತಿ ಪ. ಪಂಗಡದ ನೂರಕ್ಕಿಂತಲೂ ಅಧಿಕ ಕುಟುಂಬಗಳಿಗೆ ನೀರಿನ ಡ್ರಮ್ ನೀಡಲಾಯಿತು.

ಪಂಚಾಯತ್‌ ಉಪಾಧ್ಯಕ್ಷೆ ಶ್ರೀಮತಿ ಶಾಂತ, ಪಂಚಾಯತ್‌ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಿಬ್ಬಂದಿಗಳು, ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಕಾರ್ಯದರ್ಶಿ ಕಾಂತಪ್ಪ ಸ್ವಾಗತಿಸಿ, ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಜಮಾ ಖರ್ಚು ಮತ್ತು ಅನುಪಾಲನ ವರದಿ ವಾಚಿಸಿ, ಧನ್ಯವಾದಗೈದರು.

Related posts

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಮಳೆಗಾಗಿ ಪ್ರಾರ್ಥನೆ: ಶ್ರೀ ದೇವರಿಗೆ 150 ಸೀಯಾಳ ಅಭಿಷೇಕ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya
error: Content is protected !!