23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಗ್ರಾ.ಪಂ. ಗ್ರಾಮ ಸಭೆ

ಹೊಸಂಗಡಿ : ಹೊಸಂಗಡಿ ಗ್ರಾಮ ಪಂಚಾಯತದ 2024-25ನೇ ಸಾಲಿನ ಮೊದಲನೇ ಹಂತದ ಗ್ರಾಮ ಸಭೆಯು ಜು.11ರಂದು ಗ್ರಾ. ಪಂ. ಅಧ್ಯಕ್ಷ ಜಗದೀಶ್ ಹೆಗ್ಡೆ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕ ಇಲಾಖಾ ಹಿರಿಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.

ತಿನ್ನುವ ಆಹಾರ ಕಳಪೆ ಆಗಬಾರದು, ಹೋಟೆಲ್ ಗಳಲ್ಲಿ ಕಳಪೆ ಮಟ್ಟದ ಎಣ್ಣೆಗಳನ್ನು ಆಹಾರಗಳಿಗೆ ಬಳಸುತ್ತಿದ್ದಾರೆ. ಇದನ್ನು ನಿಲ್ಲಿಸಬೇಕು. ಹಾಗೂ ಕಳಪೆ ಮಟ್ಟದ ತುಪ್ಪ ಈ ಪ್ರದೇಶದಲ್ಲಿ ಮಾರಾಟ ಆಗುತ್ತಿದೆ ಇದು ಆರೋಗ್ಯಕ್ಕೆ ನೇರ ಪರಿಣಾಮ ಬೀರುತ್ತಿದೆ. ಹೊಸಂಗಡಿಯ ಎಷ್ಟೋ ಹೋಟೆಲ್ ಗಳಲ್ಲಿ ಬಚ್ಚಲು ಗುಂಡಿಗಳಿಲ್ಲ ಎಂದು ಗ್ರಾಮಸ್ಥ ಸತೀಶ್ ಆರೋಪಿದರು.

ಶಾಲೆಗಳಲ್ಲಿ ಅಡುಗೆ ಕೆಲಸದ ಮಹಿಳೆಯರಿಗೆ ಕೊಡುವ ವೇತನ ಸಾಕಾಗುವುದಿಲ್ಲ, ವೇತನ ಹೆಚ್ಚಿಸಬೇಕು. ಬಡಕೋಡಿ ಸರಕಾರಿ ಶಾಲೆಗೆ ಹೆಚ್ಚುವರಿ ಅತಿಥಿ ಶಿಕ್ಷಕರ ನೇಮಕಕ್ಕೆ ಗ್ರಾಮಸ್ಥರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಆಗ್ರಹಿಸಿದರು.

2023-24ನೇ ಸಾಲಿನ ಪಂಚಾಯತ್ ನಿಧಿಯಿಂದ ಪ. ಜಾತಿ ಪ. ಪಂಗಡದ ನೂರಕ್ಕಿಂತಲೂ ಅಧಿಕ ಕುಟುಂಬಗಳಿಗೆ ನೀರಿನ ಡ್ರಮ್ ನೀಡಲಾಯಿತು.

ಪಂಚಾಯತ್‌ ಉಪಾಧ್ಯಕ್ಷೆ ಶ್ರೀಮತಿ ಶಾಂತ, ಪಂಚಾಯತ್‌ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸಿಬ್ಬಂದಿಗಳು, ಗ್ರಾಮಸ್ಥರು ಹಾಜರಿದ್ದರು.

ಪಂಚಾಯತ್ ಕಾರ್ಯದರ್ಶಿ ಕಾಂತಪ್ಪ ಸ್ವಾಗತಿಸಿ, ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಗಳನ್ನು ಮಂಡಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಜಮಾ ಖರ್ಚು ಮತ್ತು ಅನುಪಾಲನ ವರದಿ ವಾಚಿಸಿ, ಧನ್ಯವಾದಗೈದರು.

Related posts

ಕಳೆಂಜ ಗ್ರಾ.ಪಂ. ಹಾಗೂ ಜನನಿ ಮಹಿಳಾ ಒಕ್ಕೂಟದಿಂದ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ಮರೋಡಿ: ಹಲ್ಲೆ, ಜೀವ ಬೆದರಿಕೆ ಆರೋಪ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya
error: Content is protected !!