ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya

ಬಳಂಜ: ನಾಲ್ಕೂರು ಗ್ರಾಮದ ಕುದ್ರೊಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ, ಚಿರತೆಗಳ ಹಾವಳಿಯಿಂದ ಈ ರಸ್ತೆಯಲ್ಲಿ ಓಡಾಡಲು ಹಾಗೂ ವಾಹನ ಸಂಚಾರ ಮಾಡಲು ಭಯದ ವಾತಾವರಣ ನಿರ್ಮಾಣವಾಗಿತ್ತು.

ಈ ಭಾಗದಲ್ಲಿ ದಾರಿ ದೀಪದ ವ್ಯವಸ್ಥೆ ಮಾಡಬೇಕಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಕುಲಾಲ್ ಇವರಿಗೆ ಸ್ಥಳಿಯರು ಸಮಾಜ ಸೇವಕರಾದ ಕರುಣಾಕರ ಹೆಗ್ಡೆ ಬೊಕ್ಕಸ ಮನವಿ ಸಲ್ಲಿಸಿದ್ದರು.

ಇವರ ಮನವಿಗೆ ಬಳಂಜ ಗ್ರಾಮ ಪಂಚಾಯತ್ ಸ್ಪಂದಿಸಿ ದಾರಿದೀಪವನ್ನು ಅಳವಡಿಸಲಾಗಿದೆ. ಪಂಚಾಯತ್ ಆಡಳಿತ ಮಂಡಳಿಯ ಸರ್ವ ಸದಸ್ಯರಿಗೆ ಕರುಣಾಕರ ಹೆಗ್ಡೆಯವರು ಕೃತಜ್ಞತೆ ಸಲ್ಲಿಸಿದ್ದಾರೆ.

Leave a Comment

error: Content is protected !!