23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಸ.ಉ.ಪ್ರಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ

ಕಣಿಯೂರು : ಅಪ್ರಾಪ್ತ ವಯಸ್ಕ ಮಕ್ಕಳ ಮೇಲೆ ಪೋಷಕರು ಹೆಚ್ಚು ಗಮನಹರಿಸಬೇಕು ಅವರು ಹೊರಗಿನ ಯಾವುದೇ ಆಮಿಷಗಳಿಗೆ ಬಲಿಯಾಗದೆ ಸುರಕ್ಷತೆಯಿಂದ ಇರುವಂತೆ ನೋಡಿಕೊಳ್ಳಬೇಕೆಂದು ಉಪ್ಪಿನಂಗಡಿ ಎಎಸ್.ಐ ಕವಿತ ರವರು ಕಿವಿಮಾತು ಹೇಳಿದರು.

ಅವರು ಕಣಿಯೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಕ್ಸೋ ಕಾಯಿದೆಯ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳಲ್ಲಿ ಒಳ್ಳೆಯ ಸ್ಪರ್ಶ, ಕೆಟ್ಟ ಸ್ಪರ್ಶಗಳ ಬಗ್ಗೆ ತಿಳುವಳಿಕೆ ಮೂಡಿಸಬೇಕು. ನೆರೆಹೊರೆ, ಶಾಲೆ, ಸಾರ್ವಜನಿಕ ಸ್ಥಳಗಳಲ್ಲಿ ಏನಾದರೂ ಲೈಂಗಿಕ ದೌರ್ಜನ್ಯ ನಡೆದರೆ ಅದನ್ನು ಪೋಷಕರಲ್ಲಿ ಹಂಚಿಕೊಳ್ಳುವಂತೆ ತಿಳಿಸಿದರು.

ಯುವಕ ಯುವತಿಯರು ಸೋಶಿಯಲ್ ಮೀಡಿಯಾ ಬಳಸುವಾಗ ಯಾವುದೇ ರೀತಿಯ ಪ್ರಚೋದನಾತ್ಮಕ ಸಂಗತಿಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಪೋಕ್ಸೋ ಕಾಯಿದೆ ಮಕ್ಕಳಿಗೆ ತುಂಬಾ ಉಪಕಾರಿಯಾಗಿದ್ದು ಯಾವುದೇ ಸಂದರ್ಭಗಳಲ್ಲಿ ದೌರ್ಜನ್ಯ ವಾಗಿದೆ ಎಂದು ಕಂಡುಬಂದರೆ ನಿಮ್ಮ ಪೋಷಕರಿಗೆ ತಿಳಿಸಿ ಮತ್ತು ಭಯ ಪಡದೆ ದೂರು ದಾಖಲಿಸಿ ನ್ಯಾಯ ಪಡೆಯಬೇಕು .ನಮ್ಮ ಇಲಾಖೆ ಯಾವುದೇ ಸಂದರ್ಭದಲ್ಲೂ ನಿಮ್ಮ ಸಹಕಾರಕ್ಕೆ ಬರುತ್ತದೆ ಎಂದರು.


ಪೋಕ್ಸೋ ಕಾಯಿದೆಯ ಬಗ್ಗೆ ಮಕ್ಕಳಿಗೆ ಶಾಲೆಯಲ್ಲಿಯೇ ಹೆಚ್ಚು ತಿಳುವಳಿಕೆ ಮೂಡಿಸಿ ಮಕ್ಕಳಿಗೆ ಸಮಾಜದಲ್ಲಿ ಯಾವುದೇ ದೌರ್ಜನ್ಯ ವಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಆರಕ್ಷಕ ಠಾಣೆಯ ಗಜೇಂದ್ರ, ರಾಮಣ್ಣ ಗೌಡ, ಪಂಚಾಯತ್ ಸದಸ್ಯರಾದ ಯಶೋಧರ ಶೆಟ್ಟಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಬಾಲಕೃಷ್ಣ ಕುರಿಯಾಡಿ, ಮುಖ್ಯ ಶಿಕ್ಷಕರಾದ ರಶ್ಮಿ ಶೆಟ್ಟಿ. ಎಸ್.ಡಿ.ಎಂ.ಸಿ ಯ ಸರ್ವ ಸದಸ್ಯರು. ಪೋಷಕರು .ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಶ್ರೀಮತಿ ಪುಷ್ಪಲತ ನಿರೂಪಿಸಿದರು. ಶ್ರೀಮತಿ ಅನುಷಾ ವಂದಿಸಿದರು.

Related posts

ಗುರಿಪಳ್ಳದಲ್ಲಿ ಬ್ಯಾನರ್ ಹರಿದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಎ.11: ಕುಡುಮೇರು ಮನೆಯ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಬಳಂಜ ಸ.ಉ. ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಮಕ್ಕಳ ಮೆಟ್ರಿಕ್ ಮೇಳ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

Suddi Udaya
error: Content is protected !!