22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ( ಸ್ವಾಯತ್ತ) , ಉಜಿರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಸ್ವಯಂಸೇವಕರು ಕಕ್ಕರಬೆಟ್ಟು , ಕಿರಿಯಾಡಿಯಲ್ಲಿ ಗದ್ದೆ ನಾಟಿ ನಡೆಸಿದರು.


ಮಾಲೀಕರಾದ ಡೀಕಯ್ಯ ಪೂಜಾರಿಯವರ ಮಾರ್ಗದರ್ಶನದಲ್ಲಿ 35 ಸ್ವಯಂಸೇವಕರ ತಂಡವು ಒಂದು ಎಕರೆ ಜಾಗದಲ್ಲಿ ಗದ್ದೆನಾಟಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.
ಮನೆಯ ಹಿರಿಯರು ಹಲವಾರು ಕೃಷಿಯ ತಂತ್ರಗಳು , ಮತ್ತು ಆಧುನಿಕ ಯುಗದಲ್ಲಿ ಯುವ ಜನತೆಗೆ ಅಗತ್ಯವಾಗಿ ಬೇಕಾಗಿರುವ ಕೃಷಿಯ ಜ್ಞಾನದ ಕುರಿತು ವಿಚಾರವನ್ನು ಹಂಚಿಕೊಂಡರು.

ಯೋಜನಾಧಿಕಾರಿಗಳಾದ ಡಾ.ಮಹೇಶ್ ಕುಮಾರ್ ಶೆಟ್ಟಿ ಹೆಚ್. ಮತ್ತು ಪ್ರೊ. ದೀಪಾ ಆರ್. ಪಿ. , ಸಾಮಾಜಿಕ ಜವಾಬ್ದಾರಿ ಉಪಕ್ರಮ ಸಮಿತಿಯ ಸದಸ್ಯರಾದ ಶ್ರೀಮತಿ ಶ್ರುತಿ ,ರಸಾಯನ ಶಾಸ್ತ್ರ ವಿಭಾಗದ ಸಹಾಯಕರಾದ ಪರಮೇಶ್ವರ್ ಮತ್ತು ಸ್ವಯಂಸೇವಕರು ಉಪಸ್ಥಿತರಿದ್ದರು.

Related posts

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಜು.22: ಕಳೆಂಜ ಮತ್ತು ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಸಂಭ್ರಮ 2025

Suddi Udaya

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

Suddi Udaya

ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ದ ಯುವ ಕಾಂಗ್ರೇಸ್ ನಿಂದ ಸಂಸತ್ ಘೇರಾವ್ ಪ್ರತಿಭಟನೆ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ಬಿಗೆ ರೋಟರಿ ಅಂತರಾಷ್ಟ್ರೀಯ ಜಿಲ್ಲೆ 3181ರ ಪರಮೋಚ್ಛ “ಡೈಮಂಡ್ ಪ್ಲಸ್” ಪ್ರಶಸ್ತಿ

Suddi Udaya
error: Content is protected !!