24 C
ಪುತ್ತೂರು, ಬೆಳ್ತಂಗಡಿ
April 3, 2025
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಕಲ್ಲಿನ ಕೋರೆಗೂ ನನಗೂ ಸಂಬಂಧವಿಲ್ಲ ಬೆಳ್ತಂಗಡಿ ಮಾರಿ ಗುಡಿಯಲ್ಲಿ ಶಶಿರಾಜ್ ಶೆಟ್ಟಿ ಪ್ರಮಾಣ

ಬೆಳ್ತಂಗಡಿ: ಮೇಲಂತಬೆಟ್ಟು ಬಳಿ ಕಲ್ಲಿನಕೋರೆ ದಾಳಿ ವೇಳೆ ಉದ್ದೇಶಪೂರ್ವಕವಾಗಿ ನನ್ನ ಹೆಸರನ್ನು ಸೇರಿಸಿ ಕೇಸ್ ದಾಖಲಿಸಿ ಜೈಲಿಗಟ್ಟಿದವರಿಗೆ ಬೆಳ್ತಂಗಡಿ ಮಾರಿಗುಡಿಯ ತಾಯಿ ಮಹಮ್ಮಾಯಿ ಶಿಕ್ಷೆ ನೀ ಡಲಿ ಎಂದು ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರು ಜುಲೈ 12 ರಂದು ಬೆಳ್ತಂಗಡಿ ಮಹಮ್ಮಾಯಿ ದೇವಸ್ಶಾನದಲ್ಲಿ ಪ್ರಾರ್ಥಿಸಿದರು.
ಕಳೆದ 2 ತಿಂಗಳ ಹಿಂದೆ ಮೇಲಂತಬೆಟ್ಟು ಸಮೀಪ ತಹಶೀಲ್ದಾರ್ ನೇತೃತ್ವದಲ್ಲಿ ಕಲ್ಲಿನ ಕೋರೆಗೆ ದಾಳಿ ನಡೆಸಿ ನಂತರ ಉದ್ದೇಶಪೂರ್ವಕವಾಗಿ ನನ್ಮ ಹೆಸರನ್ನು ಸೇರಿಸಿ ತೇಜೋವಧೆ ಮಾಡಿದ್ದಾರೆ ರಕ್ಷಿತ್ ಶಿವರಾಂ ಒತ್ತಡಕ್ಕೆ ಮಣಿದು ಪೊಲೀಸರು ರಾತ್ರೋರಾತ್ರಿ ನನ್ನನ್ನು ಬಂಧಿಸಿದ್ದಾರೆ. ಅದಲ್ಲದೇ ಸುಮಾರು 27 ದಿನ ಜೈಲಿನಲ್ಲಿ ಇರುವಂತೆ ಮಾಡಿದ್ದಾರೆ. ಈ ಕಲ್ಲಿನ ಕೋರೆಗೂ ನನಗೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ತಾಯಿ ಮುಂದೆ ಪ್ರಮಾಣ ಮಾಡುತಿದ್ದೇನೆ. ನನ್ನನ್ನು ಈ ಪ್ರಕರಣದಲ್ಲಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ ಒತ್ತಡ ಹಾಕಿದ  ರಕ್ಷಿತ್ ಶಿವರಾಂ ಹಾಗೂ ಇದರ ಹಿಂದೆ ಷಡ್ಯಂತ್ರ ಹೂಡಿದ ಎಲ್ಲರಿಗೂ ತಾಯಿ ಮಹಮ್ಮಾಯಿ ಶಿಕ್ಷೆ ನೀಡಲಿ. ಎಂದು ಪ್ರಾರ್ಥಿಸಿದರು. ಈ ಪ್ರಮಾಣದ ವೇಳೆ ಶಾಸಕ ಹರೀಶ್ ಪೂಂಜ ಯುವ ಮೋರ್ಚಾ ,ಉಪಾಧ್ಯಕ್ಷ ಗಣೇಶ್ ಲಾಯಿಲ ಸಿ.ಎ.‌ಬ್ಯಾಂಕ್ ನಿರ್ದೇಶಕ ರಮೇಶ್ ನಲಿಕೆ,ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿಠಲ ಆಚಾರ್ಯ ಗುರುವಾಯನಕೆರೆ,ಯುವ ಮೋರ್ಚಾ  ಕಾರ್ಯದರ್ಶಿ ಹರೀಶ್ ಗೌಡ ಸಂಬೋಳ್ಯ ಕಾರ್ಯಕಾರಿಣಿ ಸದಸ್ಯ ಜಗದೀಶ್ ಕನ್ನಾಜೆ, ನ.ಪಂ ಸದಸ್ಯ ಶರತ್ ಕುಮಾರ್, ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಗುರು ಲಾಯಿಲ.ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಪುಂಜಾಲಕಟ್ಟೆ, ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ವೈಜ್ಞಾನಿಕವಾಗಿ ನಿಮಿ೯ಸಬೇಕು ಮತ್ತು ಹೆದ್ದಾರಿ ಗುತ್ತಿಗೆಯಲ್ಲಿ ನಡೆದಿರುವ ಭ್ರಷ್ಟಾಚಾರ ತನಿಖೆಗೆ ಒಳಪಡಿಸಬೇಕು ಒತ್ತಾಯಿಸಿ ಜನಾಗ್ರಹ ಸಭೆ

Suddi Udaya

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya
error: Content is protected !!