September 6, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕು. ಸುಕನ್ಯಾ ಕಾಮತ್ (ಎಸ್.ಡಿ.ಎಂ ಮಹಿಳಾ ಐಟಿಐ ಉಜಿರೆಯ ಪ್ರಾಂಶುಪಾಲ ಶ್ರೀ ವಿ. ಪ್ರಕಾಶ್ ಕಾಮತ್ ಮತ್ತು ಶ್ರೀಮತಿ ರಾಧಿಕಾ ಕಾಮತ್ ಇವರ ಪ್ರಥಮ ಪುತ್ರಿ) ಇವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಸಿ ಎ. ಕೆ.ದಾಮೋದರ ನಾಯಕ್ ಇವರ ದಾಮೋದರ ಆಂಡ್ ಕೊ ಇಲ್ಲಿ ಆಪ್ಟಿಕಲ್ ಶಿಪ್ ತರಬೇತಿ ಪಡೆದಿದ್ದು ಪ್ರಸ್ತುತ ಅಲ್ಲೇ ಉದ್ಯೋಗದಲ್ಲಿದ್ದಾರೆ. ಬಹುಮುಖ ಪ್ರತಿಭೆ ಹೊಂದಿರುವ ಕು. ಸಿ ಎ. ಸುಕನ್ಯಾರವರು ಭರತನಾಟ್ಯ ವಿದ್ವತ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಸೀನಿಯರ್ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಅನೇಕ ಪತ್ರಿಕೆಗಳಲ್ಲಿ ಕತೆ, ಕವನ ಬರೆಯುವ ಹವ್ಯಾಸ ಇರುವ ಇವರು ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾಳೆ.
ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ, ಬೆಳ್ತಂಗಡಿ ಹಾಗೂ ಎಸ್.ಡಿ ಎಂ. ಪಿ.ಯು ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುತ್ತಾರೆ.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya

ಮುಂಡಾಜೆಯ ತೇಜಲ್ ಕೆ. ಆರ್ ರವರು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Suddi Udaya

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!