22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕು. ಸುಕನ್ಯಾ ಕಾಮತ್ (ಎಸ್.ಡಿ.ಎಂ ಮಹಿಳಾ ಐಟಿಐ ಉಜಿರೆಯ ಪ್ರಾಂಶುಪಾಲ ಶ್ರೀ ವಿ. ಪ್ರಕಾಶ್ ಕಾಮತ್ ಮತ್ತು ಶ್ರೀಮತಿ ರಾಧಿಕಾ ಕಾಮತ್ ಇವರ ಪ್ರಥಮ ಪುತ್ರಿ) ಇವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಸಿ ಎ. ಕೆ.ದಾಮೋದರ ನಾಯಕ್ ಇವರ ದಾಮೋದರ ಆಂಡ್ ಕೊ ಇಲ್ಲಿ ಆಪ್ಟಿಕಲ್ ಶಿಪ್ ತರಬೇತಿ ಪಡೆದಿದ್ದು ಪ್ರಸ್ತುತ ಅಲ್ಲೇ ಉದ್ಯೋಗದಲ್ಲಿದ್ದಾರೆ. ಬಹುಮುಖ ಪ್ರತಿಭೆ ಹೊಂದಿರುವ ಕು. ಸಿ ಎ. ಸುಕನ್ಯಾರವರು ಭರತನಾಟ್ಯ ವಿದ್ವತ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಸೀನಿಯರ್ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಅನೇಕ ಪತ್ರಿಕೆಗಳಲ್ಲಿ ಕತೆ, ಕವನ ಬರೆಯುವ ಹವ್ಯಾಸ ಇರುವ ಇವರು ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾಳೆ.
ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ, ಬೆಳ್ತಂಗಡಿ ಹಾಗೂ ಎಸ್.ಡಿ ಎಂ. ಪಿ.ಯು ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುತ್ತಾರೆ.

Related posts

ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ಕುತ್ಲೂರು:ಕಾಡಬಾಗಿಲು ಸೇತುಬೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!