September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರವಾಯನಕೆರೆ: ವಿದ್ವತ್ ಕಾಲೇಜಿನಲ್ಲಿ ಆಂಗ್ಲ ಭಾಷೆ ಉಪನ್ಯಾಸಕರ ಕಾರ್ಯಾಗಾರ

ಗುರವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲಾ ಆಂಗ್ಲ ಭಾಷೆ ಉಪನ್ಯಾಸಕರ ಸಂಘದ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರವು ದಕ್ಷಿಣ ಕನ್ನಡ ಜಿಲ್ಲೆ ಪ್ರಾಂಶುಪಾಲರ ಸಂಘ ಹಾಗೂ ವಿದ್ವತ್ ಪದವಿಪೂರ್ವ ಕಾಲೇಜು ಗುರುವಾಯನಕೆರೆ ಇವರ ಸಹಭಾಗಿತ್ವದಲ್ಲಿ ಗುರುವಾಯನಕೆರೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಜು.11ರಂದು ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಎನ್. ಸುವರ್ಣ ವಹಿಸಿಕೊಂಡು , ಉಪನ್ಯಾಸಕರ ಸಂಘ ಚಟುವಟಿಕೆಯುಕ್ತವಾಗಿರಬೇಕು ಹಾಗೂ ಇಂತಹ ಕಾರ್ಯಾಗಾರವು ಉಪನ್ಯಾಸಕರ ವೃತ್ತಿಗೆ ಪೂರಕವಾಗುತ್ತದೆ ಎಂದರು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ವಿದ್ವತ್ ಪದವಿ ಪೂರ್ವ ಕಾಲೇಜಿನ ಮುಖ್ಯಸ್ಥರಾದ ಸುಭಾಷ್ ಚಂದ್ರ ಶೆಟ್ಟಿ ಮಾತನಾಡಿ, ತಮ್ಮ ಸಂಸ್ಥೆಯಲ್ಲಿ ಈ ಅವಕಾಶ ನೀಡಿದ್ದಕ್ಕಾಗಿ ಹರ್ಷ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷರಾದ ಸೋಮಶೇಖರ್ ನಾಯಕ್, ಪ್ರಾಂಶುಪಾಲರು , ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜು, ಸುಬ್ರಮಣ್ಯ ಇವರು ಪ್ರಸ್ತಾವನೆಯ ಮಾತುಗಳನ್ನಾಡಿದರು. ವೇದಿಕೆಯಲ್ಲಿ ವಿದ್ವತ್ ಸಂಸ್ಥೆಯ ಕಾರ್ಯದರ್ಶಿ ಪ್ರಜ್ವಲ್ ರೈ , ಕೋಶಾಧಿಕಾರಿ ಕಾಶೀನಾಥ್ ಮತ್ತು ಪ್ರಾಂಶುಪಾಲರಾದ ಡಾ. ಜಯೇಂದ್ರ ಬದ್ಯಾನ್ ಮತ್ತು ಉಪನ್ಯಾಸಕರ ಸಂಘದ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ, ವಿವೇಕಾನಂದ ಮುಂಡಾಜೆ ಪದವಿ ಪೂರ್ವ ಕಾಲೇಜು ಇವರು ಉಪಸ್ಥಿತರಿದ್ದರು.

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಉಪನ್ಯಾಸಕ ವಿಕಾಸ್ ಹೆಬ್ಬಾರ್ ಸ್ವಾಗತಿಸಿದರು. ವಾಣಿ ಪದವಿಪೂರ್ವ ಕಾಲೇಜು ಬೆಳ್ತಂಗಡಿ ತರಬೇತಿ ಸಂಯೋಜಕಿ ಅನುರಾಧ ಕೆ. ರಾವ್ ನಿರೂಪಿಸಿ, ಸುಳ್ಯ ಗಾಂಧಿನಗರ ಸರ್ಕಾರಿ ಪ.ಪೂ. ಕಾಲೇಜು, ಉಪನ್ಯಾಸಕ ಅಬ್ದುಲ್ ಸಮಾದ್, ವಂದಿಸಿದರು.

ಕಾರ್ಯಕ್ರಮದ ಬಳಿಕ ವಿವಿಧ ವಿಷಯಗಳಲ್ಲಿ ಕಾರ್ಯಾಗಾರವು ನಡೆಯಿತು. ವಿದ್ವತ್ ಕಾಲೇಜಿನ ಮುಖ್ಯಸ್ಥರಾದ ಸುಭಾಷ್ ಚಂದ್ರ ಶೆಟ್ಟಿ ಹಾಗೂ ವಿವಿಧ ಸಾಧನೆಗೈದವರನ್ನು ಮತ್ತು ಸಂಪನ್ಮೂಲ ವ್ಯಕ್ತಿಗಳನ್ನು ವೇದಿಕೆಯಲ್ಲಿ ಗೌರವಿಸಲಾಯಿತು.

Related posts

ಕಿಡ್ನಿ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ನಾವೂರಿನ ಯಶೋಧಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರ ಹಾಗೂ ಚಿಂತನಾ ದಿನಾಚರಣೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಪರಿಷತ್ತು ಮತ್ತು ಶೈಕ್ಷಣಿಕ ಸಂಘಗಳ ಉದ್ಘಾಟನೆ

Suddi Udaya

ಮುಡಿಪು ನವೋದಯ ಶಾಲೆಗೆ ಶಿಶಿಲ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಿವಾನಿ ಆರ್. ಪಿ. ಆಯ್ಕೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ಇಂದಬೆಟ್ಟು, ನಾವೂರು, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಕನ್ಯಾಡಿ ಗ್ರಾಮದ ಕಾರ್ಯಕರ್ತರ ಸಭೆ

Suddi Udaya
error: Content is protected !!