27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

ಗೇರುಕಟ್ಟೆ: ಮಲ್ಲೊಟ್ಟು-ಕೊಯ್ಯೂರು ಭಾಗದಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ಪದೇ-ಪದೇ ಸಮಸ್ಯೆಗಳು ಎದುರಾಗುತ್ತಿದ್ದು ಜನರು ಕತ್ತಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದೆ.

ಕೊಯ್ಯೂರಿನಲ್ಲಿ ಫೀಡರ್ ಇದ್ದು, ಮಲ್ಲೊಟ್ಟುನಿಂದ ಕೊಯ್ಯೂರಿಗೆ ಸಂರ್ಪಕದ ವಿದ್ಯುತ್‌ ಲೈನ್‌ ನಲ್ಲಿ ರಾತ್ರಿಯಿಂದ ಬೆಳಗಿನವರೆಗೆ ವಿದ್ಯುತ್ ಇರುವುದಿಲ್ಲ. ಕೊಯ್ಯೂರು ಮತ್ತು ಮಲ್ಲೊಟ್ಟು ಭಾಗಕ್ಕೆ ಬೇರೆ ಬೇರೆ ಪವರ್ ಮ್ಯಾನ್‌ ಗಳಿದ್ದರೂ ಕೂಡ ಸಮರ್ಪಕವಾಗಿ ಟೀ ಕಟ್ಟಿಂಗ್ ನಡೆಸದ ಪರಿಣಾಮ ವಿದ್ಯುತ್ ಸಮಸ್ಯೆ ಉಂಟಾಗಿದೆ. ಮಲ್ಲೊಟ್ಟು ವಿಭಾಗದ ಪವರ್‌ಮಾನ್‌ಗೆ ಕೇಳಿದರೆ ಕೊಯ್ಯೂರು ಭಾಗದ ಲೈನ್‌ ಸಮಸ್ಯೆ ಎಂದಷ್ಟೇ ಉತ್ತರ ಬರುತ್ತದೆ. ರಾತ್ರಿ ವೇಳೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಬಂದರೆ ಅಥವಾ ಮರ ಬಿದ್ದ ಹಾನಿಯಾದನ್ನು ಮೆಸ್ಕಾಂ ಕಚೇರಿಗೆ ಕರೆ ಮಾಡಿದರೆ, ದೂರವಾಣಿ ಸಂಖ್ಯೆ ಮತ್ತು ವಿಳಾಸ ಕೇಳಿ ಅವರು ಸುಮ್ಮನಾಗುತ್ತಾರೆ. ಈ ಬಗ್ಗೆ ಜೆ.ಇ ಮತ್ತು ಎ.ಇ.ಇ ಅವರಿಗೆ ದೂರು ನೀಡಿದ್ದರು ಅವರಿಂದಲೂ ಕೂಡ ಸಮಸ್ಯೆ ಪರಿಹಾರವಾಗದೆ ಸಾರ್ವಜನಿಕರು ಕತ್ತಲಲ್ಲಿ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸಿ ಪರಿಹರಿಸದಿದ್ದಲ್ಲಿ ಮಲ್ಲೊಟ್ಟು-ಕೊಯ್ಯೂರು ವಿಭಾಗದ ವಿದ್ಯುತ್ ಬಳಕೆದಾರರು ಕಚೇರಿಯಲ್ಲಿ ಧರಣಿ ಕುಳಿತುಕೊಳ್ಳುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ವಿಭಾಗಿಯ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದ ಸಭೆ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ : ಎಸ್.ಐ.ಟಿ ಯಿಂದ ದೂರುದಾರನ ಬಂಧನ, ಆರೋಗ್ಯ ತಪಾಸಣೆ ಬಳಿಕ ನ್ಯಾಯಾಲಯಕ್ಕೆ ಹಾಜರು

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ಧಿ ಯೋಜನೆ – ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಇದರ ಆಶ್ರಯದಲ್ಲಿ : ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ ಉದ್ಘಾಟನೆ

Suddi Udaya
error: Content is protected !!