23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

ಗೇರುಕಟ್ಟೆ: ಮಲ್ಲೊಟ್ಟು-ಕೊಯ್ಯೂರು ಭಾಗದಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ಪದೇ-ಪದೇ ಸಮಸ್ಯೆಗಳು ಎದುರಾಗುತ್ತಿದ್ದು ಜನರು ಕತ್ತಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದೆ.

ಕೊಯ್ಯೂರಿನಲ್ಲಿ ಫೀಡರ್ ಇದ್ದು, ಮಲ್ಲೊಟ್ಟುನಿಂದ ಕೊಯ್ಯೂರಿಗೆ ಸಂರ್ಪಕದ ವಿದ್ಯುತ್‌ ಲೈನ್‌ ನಲ್ಲಿ ರಾತ್ರಿಯಿಂದ ಬೆಳಗಿನವರೆಗೆ ವಿದ್ಯುತ್ ಇರುವುದಿಲ್ಲ. ಕೊಯ್ಯೂರು ಮತ್ತು ಮಲ್ಲೊಟ್ಟು ಭಾಗಕ್ಕೆ ಬೇರೆ ಬೇರೆ ಪವರ್ ಮ್ಯಾನ್‌ ಗಳಿದ್ದರೂ ಕೂಡ ಸಮರ್ಪಕವಾಗಿ ಟೀ ಕಟ್ಟಿಂಗ್ ನಡೆಸದ ಪರಿಣಾಮ ವಿದ್ಯುತ್ ಸಮಸ್ಯೆ ಉಂಟಾಗಿದೆ. ಮಲ್ಲೊಟ್ಟು ವಿಭಾಗದ ಪವರ್‌ಮಾನ್‌ಗೆ ಕೇಳಿದರೆ ಕೊಯ್ಯೂರು ಭಾಗದ ಲೈನ್‌ ಸಮಸ್ಯೆ ಎಂದಷ್ಟೇ ಉತ್ತರ ಬರುತ್ತದೆ. ರಾತ್ರಿ ವೇಳೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಬಂದರೆ ಅಥವಾ ಮರ ಬಿದ್ದ ಹಾನಿಯಾದನ್ನು ಮೆಸ್ಕಾಂ ಕಚೇರಿಗೆ ಕರೆ ಮಾಡಿದರೆ, ದೂರವಾಣಿ ಸಂಖ್ಯೆ ಮತ್ತು ವಿಳಾಸ ಕೇಳಿ ಅವರು ಸುಮ್ಮನಾಗುತ್ತಾರೆ. ಈ ಬಗ್ಗೆ ಜೆ.ಇ ಮತ್ತು ಎ.ಇ.ಇ ಅವರಿಗೆ ದೂರು ನೀಡಿದ್ದರು ಅವರಿಂದಲೂ ಕೂಡ ಸಮಸ್ಯೆ ಪರಿಹಾರವಾಗದೆ ಸಾರ್ವಜನಿಕರು ಕತ್ತಲಲ್ಲಿ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸಿ ಪರಿಹರಿಸದಿದ್ದಲ್ಲಿ ಮಲ್ಲೊಟ್ಟು-ಕೊಯ್ಯೂರು ವಿಭಾಗದ ವಿದ್ಯುತ್ ಬಳಕೆದಾರರು ಕಚೇರಿಯಲ್ಲಿ ಧರಣಿ ಕುಳಿತುಕೊಳ್ಳುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ

Suddi Udaya

ಜ್ಯೋತಿಷ್ಯ ಶಾಸ್ತ್ರದ ಸಾಧನೆಗಾಗಿ ಬೆಳ್ತಂಗಡಿಯ ಯುವ ಜ್ಯೋತಿಷಿ ಯೋಗೀಶ್ ಆಚಾರ್ಯರಿಗೆ ಧ್ರುವ ನಕ್ಷತ್ರ ಅವಾರ್ಡ್

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya
error: Content is protected !!