23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

ಗೇರುಕಟ್ಟೆ: ಮಲ್ಲೊಟ್ಟು-ಕೊಯ್ಯೂರು ಭಾಗದಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ಪದೇ-ಪದೇ ಸಮಸ್ಯೆಗಳು ಎದುರಾಗುತ್ತಿದ್ದು ಜನರು ಕತ್ತಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದೆ.

ಕೊಯ್ಯೂರಿನಲ್ಲಿ ಫೀಡರ್ ಇದ್ದು, ಮಲ್ಲೊಟ್ಟುನಿಂದ ಕೊಯ್ಯೂರಿಗೆ ಸಂರ್ಪಕದ ವಿದ್ಯುತ್‌ ಲೈನ್‌ ನಲ್ಲಿ ರಾತ್ರಿಯಿಂದ ಬೆಳಗಿನವರೆಗೆ ವಿದ್ಯುತ್ ಇರುವುದಿಲ್ಲ. ಕೊಯ್ಯೂರು ಮತ್ತು ಮಲ್ಲೊಟ್ಟು ಭಾಗಕ್ಕೆ ಬೇರೆ ಬೇರೆ ಪವರ್ ಮ್ಯಾನ್‌ ಗಳಿದ್ದರೂ ಕೂಡ ಸಮರ್ಪಕವಾಗಿ ಟೀ ಕಟ್ಟಿಂಗ್ ನಡೆಸದ ಪರಿಣಾಮ ವಿದ್ಯುತ್ ಸಮಸ್ಯೆ ಉಂಟಾಗಿದೆ. ಮಲ್ಲೊಟ್ಟು ವಿಭಾಗದ ಪವರ್‌ಮಾನ್‌ಗೆ ಕೇಳಿದರೆ ಕೊಯ್ಯೂರು ಭಾಗದ ಲೈನ್‌ ಸಮಸ್ಯೆ ಎಂದಷ್ಟೇ ಉತ್ತರ ಬರುತ್ತದೆ. ರಾತ್ರಿ ವೇಳೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಬಂದರೆ ಅಥವಾ ಮರ ಬಿದ್ದ ಹಾನಿಯಾದನ್ನು ಮೆಸ್ಕಾಂ ಕಚೇರಿಗೆ ಕರೆ ಮಾಡಿದರೆ, ದೂರವಾಣಿ ಸಂಖ್ಯೆ ಮತ್ತು ವಿಳಾಸ ಕೇಳಿ ಅವರು ಸುಮ್ಮನಾಗುತ್ತಾರೆ. ಈ ಬಗ್ಗೆ ಜೆ.ಇ ಮತ್ತು ಎ.ಇ.ಇ ಅವರಿಗೆ ದೂರು ನೀಡಿದ್ದರು ಅವರಿಂದಲೂ ಕೂಡ ಸಮಸ್ಯೆ ಪರಿಹಾರವಾಗದೆ ಸಾರ್ವಜನಿಕರು ಕತ್ತಲಲ್ಲಿ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸಿ ಪರಿಹರಿಸದಿದ್ದಲ್ಲಿ ಮಲ್ಲೊಟ್ಟು-ಕೊಯ್ಯೂರು ವಿಭಾಗದ ವಿದ್ಯುತ್ ಬಳಕೆದಾರರು ಕಚೇರಿಯಲ್ಲಿ ಧರಣಿ ಕುಳಿತುಕೊಳ್ಳುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಬಾಯ೯ ಬಿಜೆಪಿ ಸ್ಪಂದನ ಸಮಿತಿಯಿಂದ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಸಹಾಯ ಹಸ್ತ

Suddi Udaya

ಮಂಗಳೂರುನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗಾಗಿ ವಕೀಲರ ಸಂಘದಿಂದ ಸಮಾಲೋಚನಾ ಸಭೆ: ಮಂಗಳೂರಿನಲ್ಲಿ ನಮಗೆ ಬೇಕು ಹೈಕೋರ್ಟ್ ಪೀಠ: ಧನಂಜಯ್ ರಾವ್

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya
error: Content is protected !!