ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಲ್ಲೊಟ್ಟು -ಕೊಯ್ಯೂರು ವಿದ್ಯುತ್ ಫೀಡರ್ ನಲ್ಲಿ ಪರಿಹಾರ ಕಾಣದ ವಿದ್ಯುತ್ ಸಮಸ್ಯೆ.

ಗೇರುಕಟ್ಟೆ: ಮಲ್ಲೊಟ್ಟು-ಕೊಯ್ಯೂರು ಭಾಗದಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ಪದೇ-ಪದೇ ಸಮಸ್ಯೆಗಳು ಎದುರಾಗುತ್ತಿದ್ದು ಜನರು ಕತ್ತಲೆಯಲ್ಲಿ ಕುಳಿತುಕೊಳ್ಳುವ ಪರಿಸ್ಥಿತಿ ಉಂಟಾಗಿದೆ.

ಕೊಯ್ಯೂರಿನಲ್ಲಿ ಫೀಡರ್ ಇದ್ದು, ಮಲ್ಲೊಟ್ಟುನಿಂದ ಕೊಯ್ಯೂರಿಗೆ ಸಂರ್ಪಕದ ವಿದ್ಯುತ್‌ ಲೈನ್‌ ನಲ್ಲಿ ರಾತ್ರಿಯಿಂದ ಬೆಳಗಿನವರೆಗೆ ವಿದ್ಯುತ್ ಇರುವುದಿಲ್ಲ. ಕೊಯ್ಯೂರು ಮತ್ತು ಮಲ್ಲೊಟ್ಟು ಭಾಗಕ್ಕೆ ಬೇರೆ ಬೇರೆ ಪವರ್ ಮ್ಯಾನ್‌ ಗಳಿದ್ದರೂ ಕೂಡ ಸಮರ್ಪಕವಾಗಿ ಟೀ ಕಟ್ಟಿಂಗ್ ನಡೆಸದ ಪರಿಣಾಮ ವಿದ್ಯುತ್ ಸಮಸ್ಯೆ ಉಂಟಾಗಿದೆ. ಮಲ್ಲೊಟ್ಟು ವಿಭಾಗದ ಪವರ್‌ಮಾನ್‌ಗೆ ಕೇಳಿದರೆ ಕೊಯ್ಯೂರು ಭಾಗದ ಲೈನ್‌ ಸಮಸ್ಯೆ ಎಂದಷ್ಟೇ ಉತ್ತರ ಬರುತ್ತದೆ. ರಾತ್ರಿ ವೇಳೆಯಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಬಂದರೆ ಅಥವಾ ಮರ ಬಿದ್ದ ಹಾನಿಯಾದನ್ನು ಮೆಸ್ಕಾಂ ಕಚೇರಿಗೆ ಕರೆ ಮಾಡಿದರೆ, ದೂರವಾಣಿ ಸಂಖ್ಯೆ ಮತ್ತು ವಿಳಾಸ ಕೇಳಿ ಅವರು ಸುಮ್ಮನಾಗುತ್ತಾರೆ. ಈ ಬಗ್ಗೆ ಜೆ.ಇ ಮತ್ತು ಎ.ಇ.ಇ ಅವರಿಗೆ ದೂರು ನೀಡಿದ್ದರು ಅವರಿಂದಲೂ ಕೂಡ ಸಮಸ್ಯೆ ಪರಿಹಾರವಾಗದೆ ಸಾರ್ವಜನಿಕರು ಕತ್ತಲಲ್ಲಿ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸಿ ಪರಿಹರಿಸದಿದ್ದಲ್ಲಿ ಮಲ್ಲೊಟ್ಟು-ಕೊಯ್ಯೂರು ವಿಭಾಗದ ವಿದ್ಯುತ್ ಬಳಕೆದಾರರು ಕಚೇರಿಯಲ್ಲಿ ಧರಣಿ ಕುಳಿತುಕೊಳ್ಳುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ನಾವರ ದೇವಸ್ಥಾನದ ಬಳಿ ರಬ್ಬರ್ ತೋಟಕ್ಕೆ ಬೆಂಕಿ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya

ಜ.3 -4: ನಲಿಕೆ ಸಮಾಜ ಬಾಂಧವರ 5 ಓವರ್‌ಗಳ 7 ಜನರ ಹೊನಲು ಬೆಳಕಿನ ಸೂಪರ್ ಸಿಕ್ಸ್ ಅಂಡರ್ ಆರ್ಮ್ ಕ್ರಿಕೆಟ್‌ ಪಂದ್ಯಾಟ : ಮಾರಿಗುಡಿ ಫ್ರೆಂಡ್ಸ್ ಟ್ರೋಫಿ – 2026

Suddi Udaya
error: Content is protected !!