38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

ನಾವೂರು: ನಿಷೇಧದ ನಡುವೆಯೂ ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ , ನಡ ಗ್ರಾಮದ ಬಳ್ಳಿತೋಟ- ಬೋಜಾರ- ಮುಡಾಯಿಬೆಟ್ಟು ಸಂಪರ್ಕದ ರಸ್ತೆಯಲ್ಲಿರುವ ಶಿಥಿಲವಾದ ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ ಮಾಡಲಾಗಿದೆ.

ಕೈಕಂಬ ಸೇತುವೆ ಶಿಥಿಲವಾಗಿದ್ದು , ಸದರಿ ಸೇತುವೆಯಲ್ಲಿ ಘನ ವಾಹನ ಸಂಚಾರ ಮಾಡದಂತೆ ನಿಷೇಧಿಸಿ ನಾವೂರು ಗ್ರಾಮ ಪಂಚಾಯತ್ ಸೇತುವೆ ಬಳಿಕ ಫಲಕ ಅಳವಡಿಸಿತ್ತು. ಆದರೂ ಕೆಲವೊಂದು ಘನ ವಾಹನಗಳು ಸೇತುವೆ ಮೇಲೆ ಸಂಚಾರ ಮಾಡುವ ಬಗ್ಗೆ ಜು. 8 ರಂದು ನಾವೂರು ಗ್ರಾಮಸಭೆಯಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದಾಗಿ ಎಚ್ಚೆತ್ತ ಗ್ರಾಮ ಪಂಚಾಯತ್ ಆಡಳಿತ ಇಂದು ಘನ ವಾಹನ ಸಂಚಾರಿಸದಂತೆ ತಡೆಯಲು ಮರದ ತಡೆಗೋಡೆ ನಿರ್ಮಾಣ ಮಾಡಿದೆ. ಜೊತೆಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿದುಕೊಂಡಿದ್ದಾರೆ.

Related posts

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya

ಉಜಿರೆ: ರಾಷ್ಟೀಯ ಹಿಂದೂ ಜಾಗರಣ ವೇದಿಕೆ ಆಶ್ರಯದಲ್ಲಿ “ಧರ್ಮ ಸಿಂಹಾಸನ” ಯಕ್ಷಗಾನ ಬಯಲಾಟ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya
error: Content is protected !!