23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು: ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ

ನಾವೂರು: ನಿಷೇಧದ ನಡುವೆಯೂ ನಾವೂರು ಗ್ರಾಮದ ಕೈಕಂಬ- ಅತ್ಯಡ್ಕ , ನಡ ಗ್ರಾಮದ ಬಳ್ಳಿತೋಟ- ಬೋಜಾರ- ಮುಡಾಯಿಬೆಟ್ಟು ಸಂಪರ್ಕದ ರಸ್ತೆಯಲ್ಲಿರುವ ಶಿಥಿಲವಾದ ಕೈಕಂಬ ಸೇತುವೆಯಲ್ಲಿ ಘನ ವಾಹನ ಸಂಚಾರಿಸದಂತೆ ಮರದ ತಡೆಗೋಡೆ ನಿರ್ಮಾಣ ಮಾಡಲಾಗಿದೆ.

ಕೈಕಂಬ ಸೇತುವೆ ಶಿಥಿಲವಾಗಿದ್ದು , ಸದರಿ ಸೇತುವೆಯಲ್ಲಿ ಘನ ವಾಹನ ಸಂಚಾರ ಮಾಡದಂತೆ ನಿಷೇಧಿಸಿ ನಾವೂರು ಗ್ರಾಮ ಪಂಚಾಯತ್ ಸೇತುವೆ ಬಳಿಕ ಫಲಕ ಅಳವಡಿಸಿತ್ತು. ಆದರೂ ಕೆಲವೊಂದು ಘನ ವಾಹನಗಳು ಸೇತುವೆ ಮೇಲೆ ಸಂಚಾರ ಮಾಡುವ ಬಗ್ಗೆ ಜು. 8 ರಂದು ನಾವೂರು ಗ್ರಾಮಸಭೆಯಲ್ಲಿ ಜನಪ್ರತಿನಿಧಿಗಳು ಸೇರಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರಿಂದಾಗಿ ಎಚ್ಚೆತ್ತ ಗ್ರಾಮ ಪಂಚಾಯತ್ ಆಡಳಿತ ಇಂದು ಘನ ವಾಹನ ಸಂಚಾರಿಸದಂತೆ ತಡೆಯಲು ಮರದ ತಡೆಗೋಡೆ ನಿರ್ಮಾಣ ಮಾಡಿದೆ. ಜೊತೆಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಇಂಜಿನಿಯರ್ ಗಳು ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿದುಕೊಂಡಿದ್ದಾರೆ.

Related posts

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಶಿಶಿಲ: ಕಂಚಿನಡ್ಕ ನಿವಾಸಿ ಸುಂದರಿ ನಿಧನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya
error: Content is protected !!