32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

ಪೆರಿಂಜೆ: ಸ.ಹಿ.ಪ್ರಾ. ಶಾಲೆ ಪೆರಿಂಜೆಯಲ್ಲಿ 22 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತ ಹೊಂದಿದ ಶಿಕ್ಷಕಿ ಶಶಿಪ್ರಭಾ ಇವರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಜರುಗಿತು.


ಈ ಸಂದರ್ಭ ಗ್ರಾಮ ಪಂಚಾಯತ್ ಹೊಸಂಗಡಿಯ ಸದಸ್ಯರಾದ ಹರಿಪ್ರಸಾದ್, ಪ್ರಕಾಶ್ ದೇವಾಡಿಗ, ಶಾಂತಾ, ಬಿ ಆಯ್ ಆರ್ಟಿ ಜಗದೀಶ್, ಮಾಜಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಆಲಿಯಬ್ಬ, ರಾಜೇಶ್ ಕುಮಾರ್ ಪಿ.ವಿ, ನಿವೃತ್ತ ಮುಖ್ಯ ಶಿಕ್ಷಕರಾದ ಬೂಬ ಮಾಸ್ತರ್, ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಠ್ಠಲ ಸಿ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷರಾದ ಶೇಖರ ಕುಲಾಲ್, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.


ಶಿಕ್ಷಕರಾದ ವಿಶ್ವನಾಥ ಗೌಡ, ಶಶಿಪ್ರಭಾ ಅವರ ಜೊತೆಗಿನ ಒಡನಾಟದ ಅನುಭವ ಮೆಲುಕುಗೈದರು. ವಿದ್ಯಾರ್ಥಿಗಳಾದ ಕಿಶನ್, ಕುಶಿ ಅನಿಸಿಕೆ ಹಂಚಿಕೊಂಡರು. ಸಚ್ಚಿದಾನಂದ ಹೆಗಡೆ ಸನ್ಮಾನ ಪತ್ರ ವಾಚಿಸಿದರು. ರಾಜೇಶ್ ನೆಲ್ಯಾಡಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕರಾದ ನೀನಾ ಕುವೆಲ್ಲೊ ಸ್ವಾಗತಿಸಿ, ಪುಷ್ಪ ಧನ್ಯವಾದಗೈದರು.

ಮಕ್ಕಳಿಗೆ ಸಿಹಿ ಊಟದ ಜೊತೆಗೆ ಪರಿಸರ ಕಾಳಜಿ ಬೆಳೆಸುವ ದೃಷ್ಟಿಯಿಂದ ಗಿಡಗಳನ್ನು ವಿತರಿಸಿ ಸಂಭ್ರಮಿಸಲಾಯಿತು.

Related posts

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ , ಮುಂಡಾಜೆಯಲ್ಲಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ರೂ.111 ಕೋಟಿ ವ್ಯವಹಾರ, ರೂ.24 ಲಕ್ಷ ಲಾಭ,

Suddi Udaya

ಬೆಳ್ತಂಗಡಿ: ದಾರುಸಲಾಂ ಎಜುಕೇಶನ್ ಸೆಂಟರ್ ನಲ್ಲಿ 7ನೇ ಬ್ಯಾಚ್ ನ ತರಗತಿ ಪ್ರಾರಂಭೋತ್ಸವ

Suddi Udaya

ವಿ. ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಪ್ರಶಸ್ತಿ”ಗೆ ಆಯ್ಕೆ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya
error: Content is protected !!