22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

ಪೆರಿಂಜೆ: ಸ.ಹಿ.ಪ್ರಾ. ಶಾಲೆ ಪೆರಿಂಜೆಯಲ್ಲಿ 22 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತ ಹೊಂದಿದ ಶಿಕ್ಷಕಿ ಶಶಿಪ್ರಭಾ ಇವರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಜರುಗಿತು.


ಈ ಸಂದರ್ಭ ಗ್ರಾಮ ಪಂಚಾಯತ್ ಹೊಸಂಗಡಿಯ ಸದಸ್ಯರಾದ ಹರಿಪ್ರಸಾದ್, ಪ್ರಕಾಶ್ ದೇವಾಡಿಗ, ಶಾಂತಾ, ಬಿ ಆಯ್ ಆರ್ಟಿ ಜಗದೀಶ್, ಮಾಜಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಆಲಿಯಬ್ಬ, ರಾಜೇಶ್ ಕುಮಾರ್ ಪಿ.ವಿ, ನಿವೃತ್ತ ಮುಖ್ಯ ಶಿಕ್ಷಕರಾದ ಬೂಬ ಮಾಸ್ತರ್, ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಠ್ಠಲ ಸಿ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷರಾದ ಶೇಖರ ಕುಲಾಲ್, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.


ಶಿಕ್ಷಕರಾದ ವಿಶ್ವನಾಥ ಗೌಡ, ಶಶಿಪ್ರಭಾ ಅವರ ಜೊತೆಗಿನ ಒಡನಾಟದ ಅನುಭವ ಮೆಲುಕುಗೈದರು. ವಿದ್ಯಾರ್ಥಿಗಳಾದ ಕಿಶನ್, ಕುಶಿ ಅನಿಸಿಕೆ ಹಂಚಿಕೊಂಡರು. ಸಚ್ಚಿದಾನಂದ ಹೆಗಡೆ ಸನ್ಮಾನ ಪತ್ರ ವಾಚಿಸಿದರು. ರಾಜೇಶ್ ನೆಲ್ಯಾಡಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕರಾದ ನೀನಾ ಕುವೆಲ್ಲೊ ಸ್ವಾಗತಿಸಿ, ಪುಷ್ಪ ಧನ್ಯವಾದಗೈದರು.

ಮಕ್ಕಳಿಗೆ ಸಿಹಿ ಊಟದ ಜೊತೆಗೆ ಪರಿಸರ ಕಾಳಜಿ ಬೆಳೆಸುವ ದೃಷ್ಟಿಯಿಂದ ಗಿಡಗಳನ್ನು ವಿತರಿಸಿ ಸಂಭ್ರಮಿಸಲಾಯಿತು.

Related posts

ಭಾರತೀಯ ಮಜ್ದೂರು ಸಂಘ ದ.ಕ.: ರಾಜ್ಯಘಟಕದ ತೀರ್ಮಾನಗಳ ಅನುಷ್ಠಾನಕ್ಕೆ ಜಿಲ್ಲಾ ಮಟ್ಟದಲ್ಲಿ ಸಮನ್ವಯ ಸಭೆ

Suddi Udaya

ಆಮಂತ್ರಣ ವೇದಿಕೆ ಜಿಲ್ಲಾ ಅಧ್ಯಕ್ಷರಾಗಿ ವಿಂಧ್ಯಾ ಎಸ್.ರೈ ಮತ್ತು ಉಪಾಧ್ಯಕ್ಷರಾಗಿ ಅನಿತಾ ಶೆಟ್ಟಿ ಆಯ್ಕೆ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ನೀಟ್ ಯುಜಿ (NEET-UG) ಮರು ಪರೀಕ್ಷೆಯ ದಿನಾಂಕ ನಿಗದಿ

Suddi Udaya

ನಡ: ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ ಆಯ್ಕೆ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya
error: Content is protected !!