September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

ಪೆರಿಂಜೆ: ಸ.ಹಿ.ಪ್ರಾ. ಶಾಲೆ ಪೆರಿಂಜೆಯಲ್ಲಿ 22 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತ ಹೊಂದಿದ ಶಿಕ್ಷಕಿ ಶಶಿಪ್ರಭಾ ಇವರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಜರುಗಿತು.


ಈ ಸಂದರ್ಭ ಗ್ರಾಮ ಪಂಚಾಯತ್ ಹೊಸಂಗಡಿಯ ಸದಸ್ಯರಾದ ಹರಿಪ್ರಸಾದ್, ಪ್ರಕಾಶ್ ದೇವಾಡಿಗ, ಶಾಂತಾ, ಬಿ ಆಯ್ ಆರ್ಟಿ ಜಗದೀಶ್, ಮಾಜಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಆಲಿಯಬ್ಬ, ರಾಜೇಶ್ ಕುಮಾರ್ ಪಿ.ವಿ, ನಿವೃತ್ತ ಮುಖ್ಯ ಶಿಕ್ಷಕರಾದ ಬೂಬ ಮಾಸ್ತರ್, ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಠ್ಠಲ ಸಿ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷರಾದ ಶೇಖರ ಕುಲಾಲ್, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.


ಶಿಕ್ಷಕರಾದ ವಿಶ್ವನಾಥ ಗೌಡ, ಶಶಿಪ್ರಭಾ ಅವರ ಜೊತೆಗಿನ ಒಡನಾಟದ ಅನುಭವ ಮೆಲುಕುಗೈದರು. ವಿದ್ಯಾರ್ಥಿಗಳಾದ ಕಿಶನ್, ಕುಶಿ ಅನಿಸಿಕೆ ಹಂಚಿಕೊಂಡರು. ಸಚ್ಚಿದಾನಂದ ಹೆಗಡೆ ಸನ್ಮಾನ ಪತ್ರ ವಾಚಿಸಿದರು. ರಾಜೇಶ್ ನೆಲ್ಯಾಡಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕರಾದ ನೀನಾ ಕುವೆಲ್ಲೊ ಸ್ವಾಗತಿಸಿ, ಪುಷ್ಪ ಧನ್ಯವಾದಗೈದರು.

ಮಕ್ಕಳಿಗೆ ಸಿಹಿ ಊಟದ ಜೊತೆಗೆ ಪರಿಸರ ಕಾಳಜಿ ಬೆಳೆಸುವ ದೃಷ್ಟಿಯಿಂದ ಗಿಡಗಳನ್ನು ವಿತರಿಸಿ ಸಂಭ್ರಮಿಸಲಾಯಿತು.

Related posts

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ-ಪವರ್‌’ಫುಲ್ ಅಧಿಕಾರಿಗಳ ಎಂಟ್ರಿ ಎಸ್ಪಿಯಾಗಿ ಅರುಣ್ ಕುಮಾ‌ರ್, ಕಮೀಷನ‌ರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ

Suddi Udaya

ಕಳೆಂಜ ಗ್ರಾ.ಪಂ. ಅರಣ್ಯಾಧಿಕಾರಿಗಳ ಸೂಚನೆ ಮೇರೆಗೆ ಸೇತುವೆಗೆ ಅಡ್ಡಾವಾಗಿ ಸಿಕ್ಕಾಕಿಗೊಂಡಿದ್ದ ಮರ ತೆರವು

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya
error: Content is protected !!