25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಿಂಜೆ: ನಿವೃತ್ತ ಶಿಕ್ಷಕಿ ಶಶಿಪ್ರಭಾರವರಿಗೆ ಬೀಳ್ಕೊಡುಗೆ: ನಿವೃತ್ತ ಶಿಕ್ಷಕಿಯಿಂದ ಪರಿಸರ ಕಾಳಜಿ ವಹಿಸಲು ಮಕ್ಕಳಿಗೆ ಹಣ್ಣಿನ ಗಿಡಗಳ ವಿತರಣೆ

ಪೆರಿಂಜೆ: ಸ.ಹಿ.ಪ್ರಾ. ಶಾಲೆ ಪೆರಿಂಜೆಯಲ್ಲಿ 22 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತ ಹೊಂದಿದ ಶಿಕ್ಷಕಿ ಶಶಿಪ್ರಭಾ ಇವರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಜರುಗಿತು.


ಈ ಸಂದರ್ಭ ಗ್ರಾಮ ಪಂಚಾಯತ್ ಹೊಸಂಗಡಿಯ ಸದಸ್ಯರಾದ ಹರಿಪ್ರಸಾದ್, ಪ್ರಕಾಶ್ ದೇವಾಡಿಗ, ಶಾಂತಾ, ಬಿ ಆಯ್ ಆರ್ಟಿ ಜಗದೀಶ್, ಮಾಜಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಆಲಿಯಬ್ಬ, ರಾಜೇಶ್ ಕುಮಾರ್ ಪಿ.ವಿ, ನಿವೃತ್ತ ಮುಖ್ಯ ಶಿಕ್ಷಕರಾದ ಬೂಬ ಮಾಸ್ತರ್, ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ವಿಠ್ಠಲ ಸಿ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷರಾದ ಶೇಖರ ಕುಲಾಲ್, ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.


ಶಿಕ್ಷಕರಾದ ವಿಶ್ವನಾಥ ಗೌಡ, ಶಶಿಪ್ರಭಾ ಅವರ ಜೊತೆಗಿನ ಒಡನಾಟದ ಅನುಭವ ಮೆಲುಕುಗೈದರು. ವಿದ್ಯಾರ್ಥಿಗಳಾದ ಕಿಶನ್, ಕುಶಿ ಅನಿಸಿಕೆ ಹಂಚಿಕೊಂಡರು. ಸಚ್ಚಿದಾನಂದ ಹೆಗಡೆ ಸನ್ಮಾನ ಪತ್ರ ವಾಚಿಸಿದರು. ರಾಜೇಶ್ ನೆಲ್ಯಾಡಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕರಾದ ನೀನಾ ಕುವೆಲ್ಲೊ ಸ್ವಾಗತಿಸಿ, ಪುಷ್ಪ ಧನ್ಯವಾದಗೈದರು.

ಮಕ್ಕಳಿಗೆ ಸಿಹಿ ಊಟದ ಜೊತೆಗೆ ಪರಿಸರ ಕಾಳಜಿ ಬೆಳೆಸುವ ದೃಷ್ಟಿಯಿಂದ ಗಿಡಗಳನ್ನು ವಿತರಿಸಿ ಸಂಭ್ರಮಿಸಲಾಯಿತು.

Related posts

ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ ವಿಷ ಸೇವಿಸಿ ಅತ್ಮಹತ್ಯೆ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya

ಪಟ್ರಮೆ : ಪುರುಷೋತ್ತಮ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ‌ ದೇವಸ್ಥಾನದ ವಾರ್ಷಿಕ ‌ಜಾತ್ರೆ: ದೀಕ್ಷಿತ್ ಅರಂತೊಟ್ಟು ಇವರ ‘ಡಿಲೈಟ್ ಡೆಕೋರೇಷನ್ಸ್’ ಉದ್ಘಾಟನೆ

Suddi Udaya

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
error: Content is protected !!