September 6, 2026
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಕಲ್ಲಿನ ಕೋರೆಗೂ ನನಗೂ ಸಂಬಂಧವಿಲ್ಲ ಬೆಳ್ತಂಗಡಿ ಮಾರಿ ಗುಡಿಯಲ್ಲಿ ಶಶಿರಾಜ್ ಶೆಟ್ಟಿ ಪ್ರಮಾಣ

ಬೆಳ್ತಂಗಡಿ: ಮೇಲಂತಬೆಟ್ಟು ಬಳಿ ಕಲ್ಲಿನಕೋರೆ ದಾಳಿ ವೇಳೆ ಉದ್ದೇಶಪೂರ್ವಕವಾಗಿ ನನ್ನ ಹೆಸರನ್ನು ಸೇರಿಸಿ ಕೇಸ್ ದಾಖಲಿಸಿ ಜೈಲಿಗಟ್ಟಿದವರಿಗೆ ಬೆಳ್ತಂಗಡಿ ಮಾರಿಗುಡಿಯ ತಾಯಿ ಮಹಮ್ಮಾಯಿ ಶಿಕ್ಷೆ ನೀ ಡಲಿ ಎಂದು ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಅವರು ಜುಲೈ 12 ರಂದು ಬೆಳ್ತಂಗಡಿ ಮಹಮ್ಮಾಯಿ ದೇವಸ್ಶಾನದಲ್ಲಿ ಪ್ರಾರ್ಥಿಸಿದರು.
ಕಳೆದ 2 ತಿಂಗಳ ಹಿಂದೆ ಮೇಲಂತಬೆಟ್ಟು ಸಮೀಪ ತಹಶೀಲ್ದಾರ್ ನೇತೃತ್ವದಲ್ಲಿ ಕಲ್ಲಿನ ಕೋರೆಗೆ ದಾಳಿ ನಡೆಸಿ ನಂತರ ಉದ್ದೇಶಪೂರ್ವಕವಾಗಿ ನನ್ಮ ಹೆಸರನ್ನು ಸೇರಿಸಿ ತೇಜೋವಧೆ ಮಾಡಿದ್ದಾರೆ ರಕ್ಷಿತ್ ಶಿವರಾಂ ಒತ್ತಡಕ್ಕೆ ಮಣಿದು ಪೊಲೀಸರು ರಾತ್ರೋರಾತ್ರಿ ನನ್ನನ್ನು ಬಂಧಿಸಿದ್ದಾರೆ. ಅದಲ್ಲದೇ ಸುಮಾರು 27 ದಿನ ಜೈಲಿನಲ್ಲಿ ಇರುವಂತೆ ಮಾಡಿದ್ದಾರೆ. ಈ ಕಲ್ಲಿನ ಕೋರೆಗೂ ನನಗೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ತಾಯಿ ಮುಂದೆ ಪ್ರಮಾಣ ಮಾಡುತಿದ್ದೇನೆ. ನನ್ನನ್ನು ಈ ಪ್ರಕರಣದಲ್ಲಿ ಸುಳ್ಳು ಕೇಸ್ ದಾಖಲಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ ಒತ್ತಡ ಹಾಕಿದ  ರಕ್ಷಿತ್ ಶಿವರಾಂ ಹಾಗೂ ಇದರ ಹಿಂದೆ ಷಡ್ಯಂತ್ರ ಹೂಡಿದ ಎಲ್ಲರಿಗೂ ತಾಯಿ ಮಹಮ್ಮಾಯಿ ಶಿಕ್ಷೆ ನೀಡಲಿ. ಎಂದು ಪ್ರಾರ್ಥಿಸಿದರು. ಈ ಪ್ರಮಾಣದ ವೇಳೆ ಶಾಸಕ ಹರೀಶ್ ಪೂಂಜ ಯುವ ಮೋರ್ಚಾ ,ಉಪಾಧ್ಯಕ್ಷ ಗಣೇಶ್ ಲಾಯಿಲ ಸಿ.ಎ.‌ಬ್ಯಾಂಕ್ ನಿರ್ದೇಶಕ ರಮೇಶ್ ನಲಿಕೆ,ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ವಿಠಲ ಆಚಾರ್ಯ ಗುರುವಾಯನಕೆರೆ,ಯುವ ಮೋರ್ಚಾ  ಕಾರ್ಯದರ್ಶಿ ಹರೀಶ್ ಗೌಡ ಸಂಬೋಳ್ಯ ಕಾರ್ಯಕಾರಿಣಿ ಸದಸ್ಯ ಜಗದೀಶ್ ಕನ್ನಾಜೆ, ನ.ಪಂ ಸದಸ್ಯ ಶರತ್ ಕುಮಾರ್, ಪ್ರದೀಪ್ ಶೆಟ್ಟಿ ಗುರುವಾಯನಕೆರೆ, ಗುರು ಲಾಯಿಲ.ಹಾಗೂ ಇತರರು ಉಪಸ್ಥಿತರಿದ್ದರು.

Related posts

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಕಾಪಿನಡ್ಕ: ರಸ್ತೆ ಅಪಘಾತದಲ್ಲಿ ದೊಡ್ಡ ದುರಂತವನ್ನು ತಪ್ಪಿಸಿದ ಟಿಪ್ಪರ್ ಚಾಲಕ,

Suddi Udaya

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮಸಭೆಯಲ್ಲಿ ಗ್ರಾ.ಪಂ ಮತ್ತು ಅಧಿಕಾರಿಗಳ ನಿದ್ರಾವಸ್ಥೆಯನ್ನು ಖಂಡಿಸಿ ಶೇಖರ್ ಲಾಯಿಲ ಪಂಚಾಯತ್ ಸಭಾಭವನದ ಎದುರು ನಿದ್ದೆ ಮಾಡುವ ಮೂಲಕ ಆಕ್ರೋಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನದ ಐಸಿಯು ವೆಂಟಿಲೇಟರ್‌ಗಳ ಉದ್ಘಾಟನೆ

Suddi Udaya

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya
error: Content is protected !!