September 6, 2026
ಶಾಲಾ ಕಾಲೇಜು

ವಾಣಿ ಕಾಲೇಜ್ ಎನ್ ಎಸ್ ಎಸ್ ವಿದ್ಯಾರ್ಥಿ ಗಳಿಗೆ ತರಬೇತಿ

ಬೆಳ್ತಂಗಡಿ :ವಾಣಿ ಕಾಲೇಜುಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ಜುಲೈ 12 ರಂದು ವಾಣಿ ಕಾಲೇಜಿನಲ್ಲಿ ನಡೆಯಿತು.
ದೂರ ದೃಷ್ಟಿಕೋನದಿಂದ ಮಾದರಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದೇ ನಾಯಕನ ಗುರಿಯಾಗಿರುತ್ತದೆ ಎಂದು ಜೆಸಿಐ ಭಾರತದ ಪ್ರಾವಿಷನಲ್ ನ್ಯಾಷನಲ್ ಟ್ರೈನರ್ ದೀಪಕ್ ರಾಜ್ ಹೇಳಿದರು.
ಅವರು ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾರ್ಥಿಗಳಿಗೆ ನಾಯಕತ್ವದ ಕುರಿತು ತರಬೇತಿಯನ್ನು ನೀಡುವುದರೊಂದಿಗೆ ನಾಯಕತ್ವದ ವಿವಿಧ ಆಯಾಮಗಳನ್ನು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶಂಕರ್ ರಾವ್, ಸಹ ಕಾರ್ಯಕ್ರಮ ಅಧಿಕಾರಿ ಶ್ರೀಮತಿ ದೀಕ್ಷಾ, ಘಟಕ ನಾಯಕ ಅಶ್ವಥ್ ಹಾಗೂ ನಾಯಕಿ ಅನುಕ್ಷಾ ಉಪಸಿತರಿದ್ದರು.
ಕುಮಾರಿ ಶಿವಾನಿ ತರಬೇತಿದಾರರನ್ನು ಪರಿಚಯಿಸಿದರು. ಕುಮಾರಿ ಅನನ್ಯ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ವಿದ್ಯಾರ್ಥಿ ಅಭಿವೃದ್ಧಿ ಕಾರ್ಯಗಾರಕ್ಕೆ ಚಾಲನೆ

Suddi Udaya

ಉಜಿರೆ :”ಸಮಾ‍ಜದಲ್ಲಿ ಮನಶ್ಶಾಸ್ತ್ರಜ್ಞರ ಪಾತ್ರ ಮತ್ತು ಸಾಮಾಜಿಕ ಕಾಳಜಿ” ವಿಷಯದ ಕುರಿತು ಸೆಮಿನಾರ್

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ವಾಲಿಬಾಲ್ ಪಂದ್ಯಕೂಟದಲ್ಲಿ ಬಂದಾರು ಹಿರಿಯಪ್ರಾಥಮಿಕ ಶಾಲೆ 16 ನೇ ಬಾರಿಗೆ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಅಯ್ಕೆ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya
error: Content is protected !!