23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಕು. ಸುಕನ್ಯಾ ಕಾಮತ್ (ಎಸ್.ಡಿ.ಎಂ ಮಹಿಳಾ ಐಟಿಐ ಉಜಿರೆಯ ಪ್ರಾಂಶುಪಾಲ ಶ್ರೀ ವಿ. ಪ್ರಕಾಶ್ ಕಾಮತ್ ಮತ್ತು ಶ್ರೀಮತಿ ರಾಧಿಕಾ ಕಾಮತ್ ಇವರ ಪ್ರಥಮ ಪುತ್ರಿ) ಇವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿರುತ್ತಾರೆ. ಇವರು ಸಿ ಎ. ಕೆ.ದಾಮೋದರ ನಾಯಕ್ ಇವರ ದಾಮೋದರ ಆಂಡ್ ಕೊ ಇಲ್ಲಿ ಆಪ್ಟಿಕಲ್ ಶಿಪ್ ತರಬೇತಿ ಪಡೆದಿದ್ದು ಪ್ರಸ್ತುತ ಅಲ್ಲೇ ಉದ್ಯೋಗದಲ್ಲಿದ್ದಾರೆ. ಬಹುಮುಖ ಪ್ರತಿಭೆ ಹೊಂದಿರುವ ಕು. ಸಿ ಎ. ಸುಕನ್ಯಾರವರು ಭರತನಾಟ್ಯ ವಿದ್ವತ್ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದು ಸೀನಿಯರ್ ಶಾಸ್ತ್ರೀಯ ಸಂಗೀತ ಅಭ್ಯಾಸ ಮಾಡಿರುತ್ತಾರೆ. ಅನೇಕ ಪತ್ರಿಕೆಗಳಲ್ಲಿ ಕತೆ, ಕವನ ಬರೆಯುವ ಹವ್ಯಾಸ ಇರುವ ಇವರು ಅನೇಕ ಪ್ರಶಸ್ತಿಯನ್ನು ಪಡೆದಿರುತ್ತಾಳೆ.
ಇವರು ವಾಣಿ ಆಂಗ್ಲ ಮಾಧ್ಯಮ ಶಾಲೆ ಹಳೆಕೋಟೆ, ಬೆಳ್ತಂಗಡಿ ಹಾಗೂ ಎಸ್.ಡಿ ಎಂ. ಪಿ.ಯು ಕಾಲೇಜಿನ ಹಳೆ ವಿದ್ಯಾರ್ಥಿನಿಯಾಗಿರುತ್ತಾರೆ.

Related posts

ಪೆರಿಂಜೆ ಶ್ರೀ ಧ.ಮ೦.ಅ. ಪ್ರೌಢ ಶಾಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ : ಮೊಹಮ್ಮದ್ ಅಫ್ಹಾನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya
error: Content is protected !!