30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿದ್ಯಾಮಾತಾದ ಮುಕುಟಕ್ಕೆ ಮತ್ತೊಂದು ಗರಿಮೆ: SSC-GD(ಸಶಸ್ತ್ರ ಪಡೆ) ಲಿಖಿತ ಪರೀಕ್ಷೆ ಉತ್ತೀರ್ಣಗೊಂಡ ಇಂಜಿನಿಯರಿಂಗ್ ವಿದ್ಯಾರ್ಥಿನಿ ಲಹರಿ ಕೆ.

ಪುತ್ತೂರು : ವಿದ್ಯಾಮಾತಾ ಅಕಾಡೆಮಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ತರಬೇತಿಯನ್ನು ಪಡೆದು ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ಸಿಬ್ಬಂದಿ ನೇಮಕಾತಿ ಆಯೋಗ(SSC) ನಡೆಸಿರುವ ಜನರಲ್ ಡ್ಯೂಟಿ(G D) ಹುದ್ದೆಯ ಲಿಖಿತ ಪರೀಕ್ಷೆಯನ್ನು ಎದುರಿಸಿದ ಅಕಾಡೆಮಿಯ ವಿದ್ಯಾರ್ಥಿನಿ ಲಹರಿ ಕೆ ಅವರು ಉತ್ತೀರ್ಣರಾಗಿ ಸಂಸ್ಥೆಗೆ ಮತ್ತು ಹೆತ್ತವರಿಗೆ ಹಿರಿಮೆಯನ್ನು ತಂದಿದ್ದಾರೆ.

ಮೂಲತಃ ಬಂಟ್ವಾಳ ತಾಲೂಕಿನ ವಿಟ್ಲ ಇಲ್ಲಿನ ಕುಳ ನಿವಾಸಿ , ಸೂರ್ಯನಾರಾಯಣ ಎಚ್ ಆರ್ ಮತ್ತು ಲತಾ ಪಿ ದಂಪತಿಗಳ ಪುತ್ರಿಯಾಗಿರುವ ಈಕೆ , ಪ್ರಸ್ತುತ ಪುತ್ತೂರಿನ ವಾಸ್ತಲ್ಯ ಹೌಸ್ ಕಲ್ಲೇಗ, ನೆಹರು ನಗರದ ನಿವಾಸಿ. ಮಂಗಳೂರಿನ ಕೆನರಾ ಕಾಲೇಜ್ ಇಲ್ಲಿ ಇಂಜಿನಿಯರಿಂಗ್ ಪದವಿ(E/C)ಯನ್ನು ಪಡೆದಿರುತ್ತಾರೆ.

ಆಗಸ್ಟ್ ನಲ್ಲಿ ದೈಹಿಕ ಸದೃಢತಾ ಪರೀಕ್ಷೆ ಲಹರಿ ಕೆ ಅವರ ಸಾಧನೆಗೆ ಹರ್ಷ ವ್ಯಕ್ತಪಡಿಸಿ, ಅಭಿನಂದಿಸಿರುವ ಸಂಸ್ಥೆಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು SSC-GD ಪರೀಕ್ಷೆಯಲ್ಲಿ ಉತ್ತೀರ್ಣರಾದ ಆಭ್ಯರ್ಥಿಗಳಿಗೆ ಆಗಸ್ಟ್ ತಿಂಗಳಿನಲ್ಲಿ ದೈಹಿಕ ಸದೃಢತೆಯ ಪರೀಕ್ಷೆಯು ನಡೆಯಲಿದ್ದು, ಇದರ ಸಲುವಾಗಿ ಉಚಿತ ಮೈದಾನ ತರಬೇತಿಯನ್ನು ಅಕಾಡೆಮಿ ನೀಡಲಿದೆ ಎಂದು ಹೇಳಿದ್ದಾರೆ.
ಕಳೆದ 2 ವರ್ಷಗಳಲ್ಲಿ 25ಕ್ಕೂ ಅಧಿಕ ಅಭ್ಯರ್ಥಿಗಳು ಅಗ್ನಿಪಥ್ ನೇಮಕಾತಿಯಲ್ಲಿ ಹಾಗೂ ಭಾರತೀಯ ಸೇನೆಯಲ್ಲಿ ನರ್ಸಿಂಗ್ ಅಸಿಸ್ಟೆಂಟ್ ಹುದ್ದೆ ಸೇರಿದಂತೆ ವಿವಿಧ ಸಶಸ್ತ್ರ ಪಡೆಗಳ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದನ್ನು ಕೂಡ ಇಲ್ಲಿ ಸ್ಮರಿಸಿಕೊಳ್ಳಬಹುದು.

ಎಸ್ ಎಸ್ ಸಿ GD ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಈ ಕೆಳಗಿನ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶವಿದೆ
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ (BSF), ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ (CISF ), ಸಶಸ್ತ್ರ ಸೀಮಾ ಬಲ್ (SSB), ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್(CRPF), ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ (ITBP),ಅಸ್ಸಾಂ ರೈಫಲ್ಸ್(AR)ನರೋಟಿಕ್ಸ್ ಕಂಟ್ರೋಲ್ ಬ್ಯುರೋ(NCB), ಸೆಕ್ರೆಟ್ರಿಯೇಟ್ ಸೆಕ್ಯುರಿಟಿ ಫೋರ್ಸ್(SSF) ನಲ್ಲೂ ಸೇವೆ ಸಲ್ಲಿಸಲು ಅವಕಾಶವಿದೆ.

ಅಕಾಡೆಮಿಯಲ್ಲಿ ವೈಶಿಷ್ಟ್ಯ ಪೂರ್ಣ ತರಬೇತಿ :

ಪಿಯು ,ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಗುಮಾಸ್ತ ಹುದ್ದೆಯಿಂದ ಪ್ರಾರಂಭವಾಗಿ ಐ. ಎ . ಎಸ್ ವರೆಗಿನ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ಒಂದೇ ಸೂರಿನಲ್ಲಿ ತರಬೇತಿ ನೀಡುತ್ತಿರುವ ಅಕಾಡೆಮಿಯು, 6 ತಿಂಗಳ ಪ್ರಾಥಮಿಕ ಹಂತದ ತರಬೇತಿ ನೀಡಿ 2 ವರ್ಷಗಳ ಕಾಲ ಪ್ರತೀ ವಿದ್ಯಾರ್ಥಿ ಬಗ್ಗೆಯೂ ವಿಶೇಷ ಗಮನ ನೀಡಿ , ವಿವಿಧ ಇಲಾಖೆಗಳ ನೇಮಕಾತಿ ಪರೀಕ್ಷೆಗಳನ್ನು ಎದುರಿಸಲು ಮಾರ್ಗದರ್ಶನ ಕೊಟ್ಟು ,ಅವರನ್ನು ಸಂಪೂರ್ಣ ತಯಾರಿಗೊಳಿಸಲಾಗುತ್ತದೆ. ಇಷ್ಟೇಯಲ್ಲದೇ ತರಬೇತಿ ಪಡೆದ ಪ್ರತೀ ವಿದ್ಯಾರ್ಥಿಗೂ ಉಚಿತವಾಗಿ ಕಂಪ್ಯೂಟರ್ ಹಾಗೂ ಸ್ಪೋಕನ್ ಇಂಗ್ಲೀಷ್ ತರಬೇತಿ ನೀಡಲಾಗುತ್ತದೆ.


ಸಶಸ್ತ್ರ ಪಡೆಗಳ ನೇಮಕಾತಿಗಳಿಗೆ ಅರ್ಜಿ ಸಲ್ಲಿಸುವವರಿಗೆ ಮೈದಾನ ತರಬೇತಿ ನೀಡುವುದರ ಮೂಲಕ ದೈಹಿಕ ಸದೃಢತಾ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಪ್ರತೀ ಅಭ್ಯರ್ಥಿಗಳನ್ನು ಹತ್ತಾರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅವಕಾಶ ಕಲ್ಪಿಸುವ ಮೂಲಕ ಗುರಿ ತಲುಪುವಂತೆ ಸಾಧ್ಯವಾಗಿಸಲು ವಿದ್ಯಾಮಾತಾ ಅಕಾಡೆಮಿಯ ಅತ್ಯುತ್ತಮ ತರಬೇತುದಾರರನ್ನು ಕೂಡ ಹೊಂದಿದೆ.
ಮಾಹಿತಿಗಾಗಿ ವಿದ್ಯಾಮಾತಾ ಅಕಾಡೆಮಿ
ಪುತ್ತೂರು ಮೊ. 96204 68869 ಅಥವಾ 9148935808,
ಸುಳ್ಯ ಶಾಖೆ 9448527606 ಅಥವಾ
ಕಾರ್ಕಳ ಶಾಖೆ 8310484380, 9740564044 ಸಂಪರ್ಕಿಸಬಹುದು.

Related posts

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಹಿರಿಯರಿಗೆ ಗೌರವಾರ್ಪಣೆ ಕಾರ್ಯಕ್ರಮ‌

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!