38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮುಂಡಾಜೆಯ ದಿ.‌ ಶಿವರಾಮ ಗೊಲ್ಲ ಮತ್ತು ಭಾಗೀರಥಿ ದಂಪತಿ ಪುತ್ರ ಅಶ್ವಥ್ ಎಸ್ ಅವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.

ಇವರು ಮಂಗಳೂರಿನ ಪ್ರಖ್ಯಾತ ಸಿ.ಎ ಗಣೇಶ್ ರಾವ್ ಪಿ ಕದ್ರಿ ಅವರ ಜೊತೆ ತರಬೇತಿ ಪಡೆದು ಪರೀಕ್ಷೆ ಎದುರಿಸಿ ಯಶಸ್ಸು ಸಾಧಿಸಿದ್ದಾರೆ. ಆರ್ಟಿಕಲ್‌ಶಿಪ್ ಅನ್ನೂ ಅಲ್ಲೇ ಪೂರೈಸಿದ್ದಾರೆ.
ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು ಮುಂಡಾಜೆ ಸರಸ್ವತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ, ಪ್ರೌಢ ಮತ್ತು ಪ.ಪೂ ಶಿಕ್ಷಣವನ್ನು ಎಸ್‌ಡಿಎಂ ಹೈಸ್ಕೂಲ್ ಮತ್ತು ಕಾಲೇಜು ಉಜಿರೆಯಲ್ಲಿ ಹಾಗೂ ಬಿ.ಕಾಂ ಪದವಿಯನ್ನು ಕೆನರಾ ಕಾಲೇಜು ಮಂಗಳೂರು ಇಲ್ಲಿ ಪೂರೈಸಿರುತ್ತಾರೆ.


ಅತ್ಯುತ್ತಮ ಕ್ರೀಡಾಪಟು ಕೂಡ ಆಗಿರುವ ಅವರು ಶೆಟ್ಲ್ ಬ್ಯಾಡ್ಮಿಂಟನ್ ನಲ್ಲಿ ರಾಜ್ಯ ಮಟ್ಟದ ವರೆಗೆ, ಹಾಗೂ ಕ್ರಿಕೆಟ್ ನಲ್ಲಿ ಮಂಗಳೂರು ಯುನಿವರ್ಸಿಟಿಯನ್ನು ಪ್ರತಿನಿಧಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.

Related posts

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya
error: Content is protected !!