23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮುಂಡಾಜೆಯ ದಿ.‌ ಶಿವರಾಮ ಗೊಲ್ಲ ಮತ್ತು ಭಾಗೀರಥಿ ದಂಪತಿ ಪುತ್ರ ಅಶ್ವಥ್ ಎಸ್ ಅವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.

ಇವರು ಮಂಗಳೂರಿನ ಪ್ರಖ್ಯಾತ ಸಿ.ಎ ಗಣೇಶ್ ರಾವ್ ಪಿ ಕದ್ರಿ ಅವರ ಜೊತೆ ತರಬೇತಿ ಪಡೆದು ಪರೀಕ್ಷೆ ಎದುರಿಸಿ ಯಶಸ್ಸು ಸಾಧಿಸಿದ್ದಾರೆ. ಆರ್ಟಿಕಲ್‌ಶಿಪ್ ಅನ್ನೂ ಅಲ್ಲೇ ಪೂರೈಸಿದ್ದಾರೆ.
ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು ಮುಂಡಾಜೆ ಸರಸ್ವತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ, ಪ್ರೌಢ ಮತ್ತು ಪ.ಪೂ ಶಿಕ್ಷಣವನ್ನು ಎಸ್‌ಡಿಎಂ ಹೈಸ್ಕೂಲ್ ಮತ್ತು ಕಾಲೇಜು ಉಜಿರೆಯಲ್ಲಿ ಹಾಗೂ ಬಿ.ಕಾಂ ಪದವಿಯನ್ನು ಕೆನರಾ ಕಾಲೇಜು ಮಂಗಳೂರು ಇಲ್ಲಿ ಪೂರೈಸಿರುತ್ತಾರೆ.


ಅತ್ಯುತ್ತಮ ಕ್ರೀಡಾಪಟು ಕೂಡ ಆಗಿರುವ ಅವರು ಶೆಟ್ಲ್ ಬ್ಯಾಡ್ಮಿಂಟನ್ ನಲ್ಲಿ ರಾಜ್ಯ ಮಟ್ಟದ ವರೆಗೆ, ಹಾಗೂ ಕ್ರಿಕೆಟ್ ನಲ್ಲಿ ಮಂಗಳೂರು ಯುನಿವರ್ಸಿಟಿಯನ್ನು ಪ್ರತಿನಿಧಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಗೇರುಕಟ್ಟೆ ಆಟೋ ಚಾಲಕರ ಸಂಘದ ವತಿಯಿಂದ ಶಿವರಾಮ ಪೂಜಾರಿ ರವರಿಗೆ ಧನಸಹಾಯ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya
error: Content is protected !!