25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ತೇರ್ಗಡೆ

ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮುಂಡಾಜೆಯ ದಿ.‌ ಶಿವರಾಮ ಗೊಲ್ಲ ಮತ್ತು ಭಾಗೀರಥಿ ದಂಪತಿ ಪುತ್ರ ಅಶ್ವಥ್ ಎಸ್ ಅವರು ಉತ್ತಮ ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ.

ಇವರು ಮಂಗಳೂರಿನ ಪ್ರಖ್ಯಾತ ಸಿ.ಎ ಗಣೇಶ್ ರಾವ್ ಪಿ ಕದ್ರಿ ಅವರ ಜೊತೆ ತರಬೇತಿ ಪಡೆದು ಪರೀಕ್ಷೆ ಎದುರಿಸಿ ಯಶಸ್ಸು ಸಾಧಿಸಿದ್ದಾರೆ. ಆರ್ಟಿಕಲ್‌ಶಿಪ್ ಅನ್ನೂ ಅಲ್ಲೇ ಪೂರೈಸಿದ್ದಾರೆ.
ಇವರು ತನ್ನ ಪ್ರಾಥಮಿಕ ಶಿಕ್ಷಣವನ್ನು ಮುಂಡಾಜೆ ಸರಸ್ವತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ, ಪ್ರೌಢ ಮತ್ತು ಪ.ಪೂ ಶಿಕ್ಷಣವನ್ನು ಎಸ್‌ಡಿಎಂ ಹೈಸ್ಕೂಲ್ ಮತ್ತು ಕಾಲೇಜು ಉಜಿರೆಯಲ್ಲಿ ಹಾಗೂ ಬಿ.ಕಾಂ ಪದವಿಯನ್ನು ಕೆನರಾ ಕಾಲೇಜು ಮಂಗಳೂರು ಇಲ್ಲಿ ಪೂರೈಸಿರುತ್ತಾರೆ.


ಅತ್ಯುತ್ತಮ ಕ್ರೀಡಾಪಟು ಕೂಡ ಆಗಿರುವ ಅವರು ಶೆಟ್ಲ್ ಬ್ಯಾಡ್ಮಿಂಟನ್ ನಲ್ಲಿ ರಾಜ್ಯ ಮಟ್ಟದ ವರೆಗೆ, ಹಾಗೂ ಕ್ರಿಕೆಟ್ ನಲ್ಲಿ ಮಂಗಳೂರು ಯುನಿವರ್ಸಿಟಿಯನ್ನು ಪ್ರತಿನಿಧಿಸಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ.

Related posts

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಬಳಂಜ: ಅನಾರೋಗ್ಯದಿಂದ ವರದರಾಜ್ ಪೂಜಾರಿ ನಿಧನ

Suddi Udaya

ದ.ಕ ಟೆಲಿಕಾಂ ಸಲಹಾ ಸಮಿತಿ ಸದಸ್ಯರಾಗಿ ಕೊರಗಪ್ಪ ನಾಯ್ಕ ಮುಂಡಾಜೆ ನೇಮಕ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya
error: Content is protected !!