ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಸಂತೆಕಟ್ಟೆ ಶ್ರೀ ಧರ್ಮಸ್ಥಳ ಸ್ವಾಮಿ ಕಲಾ ಭವನದಲ್ಲಿ ಜು.13ರಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಪ್ರತಿಯೊಬ್ಬನ ಜೀವನದಲ್ಲಿಯೂ ನಾಯಕತ್ವದ ಗುಣವಿರಬೇಕು. ಅಂತರ್ಗತವಾಗಿರುವಂತಹ ನಾಯಕತ್ವ ಗುಣ ಕೈ ಹಿಡಿದರೆ ಯಾವುದೇ ಕ್ಷೇತ್ರದಲ್ಲಿ ಪ್ರತಿಭಾವಂತ ವ್ಯಕ್ತಿಯಾಗಿ ಹೊರ ಹೊಮ್ಮಲು ಸಾಧ್ಯವಿದೆ ಎಂದರು.

ಪ್ರಾಚಾರ್ಯರಾದ ಸುಕುಮಾರ್ ಜೈನ್ ನೂತನ ವಿದ್ಯಾರ್ಥಿ ಸಂಘದ ನಾಯಕರುಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾದ 57 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವಕೀಲರು ಬಿ.ಕೆ ಧನಂಜಯ್ ರಾವ್, ಲೋಬೊ ಟಿವಿಎಸ್ ಶೋರೂಮ್ ನ ಮಾಲಕ ರೋನಾಲ್ಡ್ ಲೋಬೊ, ನಿವೃತ್ತ ಕಂದಾಯ ನಿರೀಕ್ಷಕರಾದ ಪದ್ಮಕುಮಾರ್ ಉಪಸ್ಥಿತರಿದ್ದರು.

ಗೌತಮಿ ಮತ್ತು ಬಳಗ ಪ್ರಾರ್ಥಿಸಿದರು. ಅನುಷಾ ನಿರೂಪಿಸಿದರು. ಪ್ರಾಧ್ಯಾಪಕರಾದ ಆನಂದ್ ಸ್ವಾಗತಿಸಿ, ತಾರನಾಥ್ ಧನ್ಯವಾದವಿತ್ತರು.

Leave a Comment

error: Content is protected !!