24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಸಂತೆಕಟ್ಟೆ ಶ್ರೀ ಧರ್ಮಸ್ಥಳ ಸ್ವಾಮಿ ಕಲಾ ಭವನದಲ್ಲಿ ಜು.13ರಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಪ್ರತಿಯೊಬ್ಬನ ಜೀವನದಲ್ಲಿಯೂ ನಾಯಕತ್ವದ ಗುಣವಿರಬೇಕು. ಅಂತರ್ಗತವಾಗಿರುವಂತಹ ನಾಯಕತ್ವ ಗುಣ ಕೈ ಹಿಡಿದರೆ ಯಾವುದೇ ಕ್ಷೇತ್ರದಲ್ಲಿ ಪ್ರತಿಭಾವಂತ ವ್ಯಕ್ತಿಯಾಗಿ ಹೊರ ಹೊಮ್ಮಲು ಸಾಧ್ಯವಿದೆ ಎಂದರು.

ಪ್ರಾಚಾರ್ಯರಾದ ಸುಕುಮಾರ್ ಜೈನ್ ನೂತನ ವಿದ್ಯಾರ್ಥಿ ಸಂಘದ ನಾಯಕರುಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾದ 57 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವಕೀಲರು ಬಿ.ಕೆ ಧನಂಜಯ್ ರಾವ್, ಲೋಬೊ ಟಿವಿಎಸ್ ಶೋರೂಮ್ ನ ಮಾಲಕ ರೋನಾಲ್ಡ್ ಲೋಬೊ, ನಿವೃತ್ತ ಕಂದಾಯ ನಿರೀಕ್ಷಕರಾದ ಪದ್ಮಕುಮಾರ್ ಉಪಸ್ಥಿತರಿದ್ದರು.

ಗೌತಮಿ ಮತ್ತು ಬಳಗ ಪ್ರಾರ್ಥಿಸಿದರು. ಅನುಷಾ ನಿರೂಪಿಸಿದರು. ಪ್ರಾಧ್ಯಾಪಕರಾದ ಆನಂದ್ ಸ್ವಾಗತಿಸಿ, ತಾರನಾಥ್ ಧನ್ಯವಾದವಿತ್ತರು.

Related posts

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಕೆಂಪು ಕಲ್ಲು ಮತ್ತು ಮರಳು ಸಾಗಾಟಕ್ಕೆ ಕಠಿಣ ಕಾನೂನು : ಜನ ಪ್ರತಿನಿಧಿಗಳ ಮೌನವೇಕೆ ? : ಸಮಾಜ ಸೇವಕ ಡಾ. ರವಿ ಕಕ್ಕೆ ಪದವು

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಅಳದಂಗಡಿಯಲ್ಲಿ ತೃಷಾ ಮೆಡಿಕಲ್ ಶುಭಾರಂಭ

Suddi Udaya
error: Content is protected !!