25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

ಬೆಳ್ತಂಗಡಿ : ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಸಂತೆಕಟ್ಟೆ ಶ್ರೀ ಧರ್ಮಸ್ಥಳ ಸ್ವಾಮಿ ಕಲಾ ಭವನದಲ್ಲಿ ಜು.13ರಂದು ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಪ್ರತಿಯೊಬ್ಬನ ಜೀವನದಲ್ಲಿಯೂ ನಾಯಕತ್ವದ ಗುಣವಿರಬೇಕು. ಅಂತರ್ಗತವಾಗಿರುವಂತಹ ನಾಯಕತ್ವ ಗುಣ ಕೈ ಹಿಡಿದರೆ ಯಾವುದೇ ಕ್ಷೇತ್ರದಲ್ಲಿ ಪ್ರತಿಭಾವಂತ ವ್ಯಕ್ತಿಯಾಗಿ ಹೊರ ಹೊಮ್ಮಲು ಸಾಧ್ಯವಿದೆ ಎಂದರು.

ಪ್ರಾಚಾರ್ಯರಾದ ಸುಕುಮಾರ್ ಜೈನ್ ನೂತನ ವಿದ್ಯಾರ್ಥಿ ಸಂಘದ ನಾಯಕರುಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿದರು.

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ಉತ್ತೀರ್ಣರಾದ 57 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವಕೀಲರು ಬಿ.ಕೆ ಧನಂಜಯ್ ರಾವ್, ಲೋಬೊ ಟಿವಿಎಸ್ ಶೋರೂಮ್ ನ ಮಾಲಕ ರೋನಾಲ್ಡ್ ಲೋಬೊ, ನಿವೃತ್ತ ಕಂದಾಯ ನಿರೀಕ್ಷಕರಾದ ಪದ್ಮಕುಮಾರ್ ಉಪಸ್ಥಿತರಿದ್ದರು.

ಗೌತಮಿ ಮತ್ತು ಬಳಗ ಪ್ರಾರ್ಥಿಸಿದರು. ಅನುಷಾ ನಿರೂಪಿಸಿದರು. ಪ್ರಾಧ್ಯಾಪಕರಾದ ಆನಂದ್ ಸ್ವಾಗತಿಸಿ, ತಾರನಾಥ್ ಧನ್ಯವಾದವಿತ್ತರು.

Related posts

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya

ಪೆರಿಂಜೆ: ಪಡ್ಡ್ಯಾರಬೆಟ್ಟ ದೈವಸ್ಥಾನ ಕ್ಷೇತ್ರ ವಾರ್ಷಿಕ ಜಾತ್ರೋತ್ಸವ ಸಂಪನ್ನ, ಸಾಧಕರಿಗೆ ಗೌರವ, ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!