38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

ಮೈರೋಳ್ತಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಬಂದಾರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಮತ್ತು ಅಂಗನವಾಡಿ ಕೇಂದ್ರ ಮೈರೋಳ್ತಡ್ಕ ಇಲ್ಲಿ ಸ್ವಚ್ಛತಾ ಶ್ರಮದಾನ ಕಾರ್ಯ ನಡೆಯಿತು.


ಶಾಲೆಯ ಅಡಿಕೆ ತೋಟದಲ್ಲಿ ಕಳೆ ಗಿಡಗಳನ್ನು ತೆಗೆದು ತೆಂಗಿನ ಮತ್ತು ಅಡಿಕೆ ಬುಡಕ್ಕೆ ಹಾಕಲಾಯಿತು. ಮತ್ತು ಅಂಗನವಾಡಿಯಲ್ಲಿ ತರಕಾರಿ ಗಿಡಗಳನ್ನು ನೆಟ್ಟು ಶಾಲಾ ಅವರಣವನ್ನು ಸ್ವಚ್ಛಗೊಳಿಸಲಾಯಿತು.


ಸ್ವಚ್ಛತಾ ಕಾರ್ಯಕ್ರಮದಲ್ಲಿ ಮೈರೋಳ್ತಡ್ಕ ಒಕ್ಕೂಟದ ಅಧ್ಯಕ್ಷ ಸುಂದರ ಪೂಜಾರಿ, ನಿಕಟ ಪೂರ್ವ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಮೈರೋಳ್ತಡ್ಕ ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ಉಪಸ್ಥಿತರಿದ್ದರು.


ಶಾಲಾ ಮುಖ್ಯ ಗುರುಗಳಾದ ಶ್ರೀಮತಿ ಚಂದ್ರಾವತಿ ಹಾಗೂ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ವಾಣಿ ಧನ್ಯವಾದ ಸಲ್ಲಿಸಿದರು. ಶ್ರಮದಾನದಲ್ಲಿ ಒಕ್ಕೂಟದ ಸದಸ್ಯರು, ಶಾಲಾ ಮಕ್ಕಳ ಪೋಷಕರು ಸಹಕಾರ ನೀಡಿದರು.

Related posts

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಬಾಂಜಾರು ಮಲೆ ಶ್ರೀ ಮಹಾಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಬಗ್ಗೆ ಸಾರ್ವಜನಿಕ ಸಮಾಲೋಚನಾ ಸಭೆ

Suddi Udaya

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya

ತುಳುನಾಡು ಒಕ್ಕೂಟ ಸಂಘಟನೆಯ ನೇತೃತ್ವದಲ್ಲಿ 5ನೇ ವರ್ಷದ ‘ಚೆನ್ನೆಮಣೆ ಗೊಬ್ಬು ಪಂಥೋ’ ಕಾರ್ಯಕ್ರಮ

Suddi Udaya
error: Content is protected !!