23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

ಉಜಿರೆ : ಇಲ್ಲಿನ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ಈ ವರ್ಷದ ಸ್ಪರ್ಧಾತ್ಮಕ ತರಗತಿಗಳನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.

ಉದ್ಘಾಟಕರಾಗಿ ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ ಶೆಟ್ಟಿ ಆಗಮಿಸಿದ್ದರು.
ಈ ಸಂದರ್ಭದಲ್ಲಿ ಕಳೆದ ವರ್ಷದ ಕರ್ನಾಟಕ ಸಿ. ಇ. ಟಿ. ಪರೀಕ್ಷೆಯಲ್ಲಿ ಕರ್ನಾಟಕದಲ್ಲಿ 1576 ನೇ ರ್‍ಯಾಂಕ್ ಪಡೆದ ಕಾಲೇಜಿನ ಹಿರಿಯ ವಿದ್ಯಾರ್ಥಿ ಕೃಪಾನಿಧಿ ಎನ್ ಎಲ್ ಇವರನ್ನು ಸನ್ಮಾನಿಸಲಾಯಿತು.


ಸನ್ಮಾನಿತರಾಗಿ ಮಾತನಾಡಿದ ಕೃಪಾನಿಧಿ, ತಾನು ಹೇಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆ ಎರಡನ್ನೂ ಸಮನಾಗಿ ಎದುರಿಸಿ ತಾನು ಈ ಸಾಧನೆ ಮಾಡಿದೆ, ತಾನು ಓದುತ್ತಿದ್ದ ಪುಸ್ತಕಗಳು, ಕಾಲೇಜಿನಲ್ಲಿ ನಡೆಸುತ್ತಿದ್ದ ಪರೀಕ್ಷೆಗಳಿಗೆ ನಡೆಸುತ್ತಿದ್ದ ಪೂರ್ವ ತಯಾರಿ, ಸಮಯದ ಹೊಂದಾಣಿಕೆ ಹಾಗೂ ಇವತ್ತಿನ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರ್‍ಯಾಂಕ್ ಎಷ್ಟು ಮುಖ್ಯ ಎನ್ನುವುದನ್ನು ವಿವರಿಸಿದರು.
ಸ್ಪರ್ಧಾತ್ಮಕ ತರಗತಿಯ ಮುಖ್ಯ ಸಂಯೋಜಕರಾದ ಶೃತ ಅಕಾಡೆಮಿ, ಮಂಗಳೂರಿನ ಡಾ. ಶೃತಕೀರ್ತಿ ರಾಜ್ ಮಾತನಾಡಿ ಈ ವರ್ಷದ ಸ್ಪರ್ಧಾತ್ಮಕ ತರಗತಿಗಳ ಸ್ವರೂಪ ಹೇಗೆ, ಯಾವ ರೀತಿ ನಡೆಯುತ್ತದೆ ಎಂಬುದರ ಪೂರ್ವ ಯೋಜನೆಗಳ ಬಗ್ಗೆ ವಿವರಿಸಿದರು.


ಉದ್ಘಾಟಕರಾಗಿ, ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕರಾದ ಬಿ ಸೋಮಶೇಖರ ಶೆಟ್ಟಿ ಮಾತನಾಡುತ್ತ ಜೀವನದಲ್ಲಿ ಒಂದು ಸ್ಪಷ್ಟ ಗುರಿ ಇರಲಿ. ಸ್ಪಷ್ಟ ಗುರಿ ಇದ್ದಾಗ ಮಾತ್ರ ಉತ್ತಮ ಸಾಧನೆ ಸಾಧ್ಯವಾಗುತ್ತದೆ. ಇದಕ್ಕೆ ಉತ್ತಮ ಉದಾಹರಣೆ ಎಂದರೆ ಇವತ್ತಿನ ಸನ್ಮಾನಿತ ಕೃಪಾನಿಧಿಯೇ ಉದಾಹರಣೆ. ಶೃದ್ದೆ ಮತ್ತು ಏಕಾಗ್ರತೆ ಈವೆರಡೂ ಕಲಿಕಾ ಸಮಯದಲ್ಲಿ ಬಹಳ ಮುಖ್ಯ. ಎಷ್ಟೋ ಕನಸುಗಳನ್ನು ಹೊತ್ತು ನಿಮ್ಮ ತಂದೆ ತಾಯಿ ಅವರೆಲ್ಲರ ಸುಖಗಳನ್ನು ತ್ಯಜಿಸಿ ನಿಮ್ಮ ಕನಸಿಗೆ ನೀರೆರೆಯುತ್ತಿದ್ದಾರೆ ಅದನ್ನು ನೀವು ಹುಸಿಗೊಳಿಸದೇ ಸದುಪಯೋಗ ಪಡಿಸಿಕೊಳ್ಳಿ. ಅಂದು ಹೇಳಿದ ಪಾಠ ಪ್ರವಚನಗಳನ್ನು ಅಂದೇ ಓದಿದರೆ ಬಹಳ ಸುಲಭವಾಗುತ್ತದೆ. ಮುಂದಿನ ಸುಖಕರ ಜೀವನಕ್ಕಾಗಿ ಇಂದು ಕಷ್ಟಪಡಲೇಬೇಕು.

ಈ ಸಮಾಜದಲ್ಲಿ ಸಾಧನೆಯ ಹೆಗ್ಗುರುತನ್ನು ಮೂಡಿಸಿದಾಗ ಮಾತ್ರ ಜೀವನಕ್ಕೊಂದು ಸಾರ್ಥಕ ಬರುತ್ತದೆ ಆ ನಿಟ್ಟಿನಲ್ಲಿ ನಿಮ್ಮ ಬದ್ಧತೆ ಇರಲಿ ಎಂದು ತಮ್ಮ ಪ್ರೇರಣಾ ಮಾತುಗಳ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಕಾರ್ಯಕ್ರಮದಲ್ಲಿ ಸಹ ಸಂಯೋಜಕರುಗಳಾದ ಡಾ. ರಾಜೇಶ್ವರಿ ಕೆ ಆರ್, ಶ್ರೀಮತಿ ಅನಿತಾ ಕೆ ಪಿ, ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.
ಭೌತ ಶಾಸ್ತ್ರ ಉಪನ್ಯಾಸಕ ಲಕ್ಷ್ಮೀಶ್ ಭಟ್ ಕಾರ್ಯಕ್ರಮ ನಿರೂಪಿಸಿ, ಸರ್ವರನ್ನೂ ಸ್ವಾಗತಿಸಿದರು. ಜೀವಶಾಸ್ತ್ರ ಉಪನ್ಯಾಸಕಿ ಡಾ. ರಾಜೇಶ್ವರಿ ಕೆ ಆರ್ ವಂದಿಸಿದರು.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಸೋಮಶೇಖರ ರವರಿಗೆ ಚಿಕಿತ್ಸಾ ನೆರವು

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!